ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.
ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…