Advertisement
ರಾಜ್ಯ

ಮತ್ತೆ ಭೂಕಂಪನ | 2.1 ರಷ್ಟು ತೀವ್ರತೆ | ಏನಿದು ಸದ್ದು ? ಯಾಕೆ ಕಂಪನ ? | ಜನರ ಪ್ರಶ್ನೆ |

Share

ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ  ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ  ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.

ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್‌ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ.  ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ. 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

11 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

50 minutes ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

8 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

14 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

14 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago