ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.
ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…