ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.
ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…