Advertisement
ಸುದ್ದಿಗಳು

ಪದೇ ಪದೇ ಭೂಮಿ ಕಂಪನ | ಮತ್ತೆ ಆತಂಕಕ್ಕೆ ಒಳಗಾಗುವ ಜನ | ಕಲ್ಮಕಾರು-ಸಂಪಾಜೆ ಪ್ರದೇಶದಲ್ಲಿ ಮತ್ತೆ ಆತಂಕ | ಭೂಮಿ ಕಂಪನದ ಕಾರಣ ಇದುವರೆಗೂ ನಿಗೂಢ…! |

Share

ವಾರದ ಹಿಂದೆ ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು, ಸಂಪಾಜೆ ಪ್ರದೇಶದಲ್ಲಿ ಭೂಕುಸಿತ, ಪ್ರವಾಹ, ಭಾರೀ ಮಳೆಯ ಸದ್ದಿನ ಬಳಿಕ ಇದೀಗ ಮತ್ತೆ ಭೂಕಂಪನದ ಸುದ್ದಿ ಕೇಳಿದೆ. ಭಾನುವಾರ ಸಂಜೆ ಕಲ್ಮಕಾರು, ಸಂಪಾಜೆ, ದೊಡ್ಡತೋಟ, ಮರ್ಕಂಜ, ಗುತ್ತಿಗಾರು, ದೇವಚಳ್ಳ ಸೇರಿದಂತೆ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ, ಅದರ ಜೊತೆಗೆ ಗುಡುಗು ಮಾದರಿಯ ಸದ್ದು ಕೂಡಾ ಜನರಿಗೆ ಕೇಳಿದೆ. ಹೀಗಾಗಿ ಮತ್ತೆ ಆತಂಕಕ್ಕೆ ಕಾರಣವಾಗಿದೆ. 

ಎರಡು ವಾರದ ಹಿಂದೆ ಭಾರೀ ಪ್ರವಾಹದಿಂದ ಕಲ್ಮಕಾರು, ಸಂಪಾಜೆ ಪ್ರದೇಶದ ಜನರನ್ನು ಅಕ್ಷರಶ: ಆತಂಕಕ್ಕೆ ತಳ್ಳಿತ್ತು ಭಾರೀ ಮಳೆ, ಜಲಸ್ಫೋಟ, ಮೇಘಸ್ಫೋಟ. ಅದಕ್ಕೂ ಎರಡು ವಾರದ ಹಿಂದೆ ಇದೇ ಪ್ರದೇಶದಲ್ಲಿ ಸತತವಾಗಿ ಭೂಕಂಪನದ ಮಾದರಿಯ ಸದ್ದುಗಳು ಕೇಳಿತ್ತು, ಭೂಮಿ ನಡುಗಿದ ಅನುಭವವಾಗಿತ್ತು. ಇದೆರಡೂ ಘಟನೆಗಳ ನಂತರ ಜನರು ಆತಂಕ್ಕೆ ಒಳಗಾಗಿದ್ದರು. ಇದೀಗ ಮತ್ತೆ ಭೂಮಿ ಕಂಪಿಸಿದ ಅನುಭವವಾದಂತೆಯೇ ಮತ್ತೆ ಆತಂಕ ಶುರುವಾಗಿದೆ. ನಿಜಕ್ಕೂ ಈ ಕಂಪನಕ್ಕೆ ಕಾರಣವೇನು ? ಎಂಬುದೇ ನಿಗೂಢ , ಯಕ್ಷ ಪ್ರಶ್ನೆ.

ಕಳೆದ ಸುಮಾರು ಒಂದು ತಿಂಗಳಿನಿಂದ ಭೂಮಿ ಕಂಪನದ ಸುದ್ದಿ ಇದೆ. ಸಂಪಾಜೆ ಪ್ರದೇಶದಲ್ಲಿ 8 ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅದಾದ ನಂತರ ಜನರೂ ಒತ್ತಾಯಿಸಿದರು. ಭೂಮಿ ಕಂಪನಕ್ಕೆ ಅಧ್ಯಯನಗಳು ನಡೆದವು. ಆದರೆ ಇದುವರೆಗೂ ಕಂಪನಕ್ಕೆ ಕಾರಣ ತಿಳಿದಿಲ್ಲ. ಕಂಪನವಾದ ಪ್ರದೇಶದಲ್ಲಿಯೇ ಭೂಕುಸಿತ, ಜಲಸ್ಫೋಟ, ಮೇಘಸ್ಫೋಟ ನಡೆಯಿತು. ಆದರೆ ಭೂಮಿ ಕಂಪನಕ್ಕೆ ಕಾರಣ ತಿಳಿದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿದರು, ಕೆಲವರು ಪರಿಸರ ನಾಶದಿಂದ ಭೂಮಿ ಕಂಪನ ಎಂದರೆ ಇನ್ನೂ ಕೆಲವರು ಕೊಳವೆಬಾವಿ ಕಾರಣ ಎಂದರು. ಇನ್ನೂ ಕೆಲವರು ಗಣಿಗಾರಿಕೆ, ರೆಸಾರ್ಟ್‌ ಗಳು ಕಾರಣ ಎಂದೂ ಹೇಳಿದರು. ಅವರವರ ವಿಶ್ಲೇಷಣೆಗೆ ತಕ್ಕಂತೆ ಕಾರಣಗಳನ್ನು ಹೇಳಿದರು. ವೈಜ್ಞಾನಿಕವಾಗಿ ಕಲ್ಮಕಾರು, ಸಂಪಾಜೆ ಪ್ರದೇಶವೇ ಕೇಂದ್ರೀಕರಿಸಿ ನಡೆಯುತ್ತಿರುವ ಭೂಕಂಪನಕ್ಕೆ , ಭಾರೀ ಮಳೆಗೆ ನಿಖರ ಕಾರಣ  ತಿಳಿದಿಲ್ಲ. ವಿಜ್ಞಾನಿಗಳು, ತಜ್ಞರು ಭೇಟಿ ನೀಡಿದರೂ ಅಧಿಕೃತ ಕಾರಣ ಇನ್ನೂ ಹೊರಬಂದಿಲ್ಲ. 2018 ರಲ್ಲೂ ಇದೇ ಮಾದರಿ ಆಗಿತ್ತು. ಸಂಪಾಜೆ ಪ್ರದೇಶದಲ್ಲಿ ಭೂಕುಸಿತವಾದ ಬಳಿಕ ತಜ್ಞರ ಅಧ್ಯಯನ ವರದಿಯಲ್ಲಿ ನಿಖರವಾದ ಕಾರಣಿವನ್ನೂ ತಿಳಿಸಿಲ್ಲ. ಈ ವರ್ಷವೂ ಅದೇ ಮಾದರಿಯ ಘಟನೆಗಳು ನಡೆದಿವೆ. ಸಂಬಂಧಿತರು ಈ ಬಗ್ಗೆ ಜಾಗೃತಿ ಮೂಡಿಸುವುದು  ಹಾಗೂ ಕಂಪನಕ್ಕೆ ಸೂಕ್ತ ಕಾರಣ ಪತ್ತೆ ಮಾಡಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

3 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

5 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

9 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

13 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

23 hours ago