ಸುಳ್ಯ | ಭೂಕಂಪನದ ತೀವ್ರತೆ 1.8 ? |

July 1, 2022
8:45 AM

ಸುಳ್ಯ ತಾಲೂಕು ಹಾಗೂ ಕೊಡಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.19 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು‌ ಇದರ ತೀವ್ರತೆ 3.0 ಇತ್ತು ಎಂದು ಖಾಸಗಿ ಸಂಸ್ಥೆಯೊಂದು ಮಾಹಿತಿ ನೀಡಿದೆ.ಆದರೆ 1.8 ರಷ್ಟು ತೀವ್ರತೆ ದಾಖಲಾಗಿದೆ ಎಂದು KSNDM ಮಾಹಿತಿ ನೀಡಿದೆ.ಸಂಪಾಜೆ, ಕಲ್ಲುಗುಂಡಿ , ಚೆಂಬು ಪ್ರದೇಶ ಕೇಂದ್ರಿತವಾಗಿದೆ. ಭೂಮಿಯ 10 ಕಿಮೀ ತಳಭಾಗದಲ್ಲಿ ಕಂಪನವಾಗಿದೆ ಎಂದು ಅದು ವರದಿ ಮಾಡಿದೆ.1.15 ಸೆಕೆಂಡ್ ಕಾಲ ಭೂಮಿ‌ ಕಂಪಿಸಿದೆ ಎಂದು ವರದಿ ಮಾಡಿದೆ.

ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ  ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು,  ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8  ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು.  ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್‌ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್
May 2, 2026
10:28 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ
May 2, 2026
10:14 PM
by: ದ ರೂರಲ್ ಮಿರರ್.ಕಾಂ
ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ
May 2, 2026
9:55 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror