ಸುಳ್ಯ ತಾಲೂಕು ಹಾಗೂ ಕೊಡಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.19 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಇದರ ತೀವ್ರತೆ 3.0 ಇತ್ತು ಎಂದು ಖಾಸಗಿ ಸಂಸ್ಥೆಯೊಂದು ಮಾಹಿತಿ ನೀಡಿದೆ.ಆದರೆ 1.8 ರಷ್ಟು ತೀವ್ರತೆ ದಾಖಲಾಗಿದೆ ಎಂದು KSNDM ಮಾಹಿತಿ ನೀಡಿದೆ.ಸಂಪಾಜೆ, ಕಲ್ಲುಗುಂಡಿ , ಚೆಂಬು ಪ್ರದೇಶ ಕೇಂದ್ರಿತವಾಗಿದೆ. ಭೂಮಿಯ 10 ಕಿಮೀ ತಳಭಾಗದಲ್ಲಿ ಕಂಪನವಾಗಿದೆ ಎಂದು ಅದು ವರದಿ ಮಾಡಿದೆ.1.15 ಸೆಕೆಂಡ್ ಕಾಲ ಭೂಮಿ ಕಂಪಿಸಿದೆ ಎಂದು ವರದಿ ಮಾಡಿದೆ.
ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು, ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…