Advertisement
ಮಾಹಿತಿ

ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳು |

Share

ಎರೆಹುಳುವನ್ನು(earthworm) ರೈತರ ಮಿತ್ರ(farmer Friend), ರೈತ(farmer) ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ(earth) ನಿರಂತರವಾಗಿ ಕೆಲಸ ಮಾಡುವ ಹುಳುಗಳು(creature) ನೈಸರ್ಗಿವಾಗಿ ಪೋಷಕಾಂಶಯುಕ್ತ(natural nutrition) ಗೊಬ್ಬರವನ್ನು(manure) ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು(earthworm manure) ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ(soil fertility) ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ.

ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ ಗೊಬ್ಬರವನ್ನು ಗಿಡದ ಸುತ್ತು ಹಾಕಿ ಮಣ್ಣಿನಿಂದ ಮುಚ್ಚಬೇಕು ಮತ್ತು ನೀರನ್ನು ಕೊಡಬೇಕು.

ಉಪಯೋಗ: ಈ ಗೊಬ್ಬರ ಅತಿ ಮುಖ್ಯವಾದ ಪೋಷಕಾಂಶ ಹೊಂದಿರುತ್ತದೆ (1-1.5% ಸಾರಜನಕ, 0.8% ರಂಜಕ, 0.7% ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತದೆ). ಬೆಳೆಯ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ರೈತರಿಗೆ ಲಾಭಗಳು:

  • ಮಣ್ಣಿನ ಫಲವತ್ತತೆ ಹೆಚ್ಚಿಸುತ್ತದೆ.
  • ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.
  • ಕೀಟಗಳ ಬಾಧೆಯಿಂದ ರಕ್ಷಣೆ ಹಾಗೂ ಬೆಳೆಗಳಿಗೆ ನಷ್ಟವನ್ನು ಕಡಿಮೆ ಮಾಡುತ್ತದೆ.
  • ಬೆಳೆಗಳ ಉತ್ಪನ್ನಗಳು ಅತೀ ಉತ್ತಮ ಹಾಗೂ ಯೋಗ್ಯವಾಗಿದ್ದು, ಹೆಚ್ಚಿನ ರುಚಿ ಹೊಂದಿರುತ್ತವೆ.
  • ಬೆಳೆಗಳು ಉತ್ತಮವಾಗಿದ್ದು, ಹೆಚ್ಚಿನ ಬೆಲೆ ಪಡೆಯುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

8 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

10 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

22 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

22 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago