Advertisement
ಮಾಹಿತಿ

ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳು |

Share

ಎರೆಹುಳುವನ್ನು(earthworm) ರೈತರ ಮಿತ್ರ(farmer Friend), ರೈತ(farmer) ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ(earth) ನಿರಂತರವಾಗಿ ಕೆಲಸ ಮಾಡುವ ಹುಳುಗಳು(creature) ನೈಸರ್ಗಿವಾಗಿ ಪೋಷಕಾಂಶಯುಕ್ತ(natural nutrition) ಗೊಬ್ಬರವನ್ನು(manure) ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು(earthworm manure) ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ(soil fertility) ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ.

Advertisement

ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ ಗೊಬ್ಬರವನ್ನು ಗಿಡದ ಸುತ್ತು ಹಾಕಿ ಮಣ್ಣಿನಿಂದ ಮುಚ್ಚಬೇಕು ಮತ್ತು ನೀರನ್ನು ಕೊಡಬೇಕು.

ಉಪಯೋಗ: ಈ ಗೊಬ್ಬರ ಅತಿ ಮುಖ್ಯವಾದ ಪೋಷಕಾಂಶ ಹೊಂದಿರುತ್ತದೆ (1-1.5% ಸಾರಜನಕ, 0.8% ರಂಜಕ, 0.7% ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತದೆ). ಬೆಳೆಯ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ರೈತರಿಗೆ ಲಾಭಗಳು:

  • ಮಣ್ಣಿನ ಫಲವತ್ತತೆ ಹೆಚ್ಚಿಸುತ್ತದೆ.
  • ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.
  • ಕೀಟಗಳ ಬಾಧೆಯಿಂದ ರಕ್ಷಣೆ ಹಾಗೂ ಬೆಳೆಗಳಿಗೆ ನಷ್ಟವನ್ನು ಕಡಿಮೆ ಮಾಡುತ್ತದೆ.
  • ಬೆಳೆಗಳ ಉತ್ಪನ್ನಗಳು ಅತೀ ಉತ್ತಮ ಹಾಗೂ ಯೋಗ್ಯವಾಗಿದ್ದು, ಹೆಚ್ಚಿನ ರುಚಿ ಹೊಂದಿರುತ್ತವೆ.
  • ಬೆಳೆಗಳು ಉತ್ತಮವಾಗಿದ್ದು, ಹೆಚ್ಚಿನ ಬೆಲೆ ಪಡೆಯುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 hour ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

9 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

9 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

9 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

9 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

19 hours ago