Advertisement
ಮಾಹಿತಿ

ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳು |

Share

ಎರೆಹುಳುವನ್ನು(earthworm) ರೈತರ ಮಿತ್ರ(farmer Friend), ರೈತ(farmer) ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ(earth) ನಿರಂತರವಾಗಿ ಕೆಲಸ ಮಾಡುವ ಹುಳುಗಳು(creature) ನೈಸರ್ಗಿವಾಗಿ ಪೋಷಕಾಂಶಯುಕ್ತ(natural nutrition) ಗೊಬ್ಬರವನ್ನು(manure) ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು(earthworm manure) ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ(soil fertility) ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ.

ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ ಗೊಬ್ಬರವನ್ನು ಗಿಡದ ಸುತ್ತು ಹಾಕಿ ಮಣ್ಣಿನಿಂದ ಮುಚ್ಚಬೇಕು ಮತ್ತು ನೀರನ್ನು ಕೊಡಬೇಕು.

ಉಪಯೋಗ: ಈ ಗೊಬ್ಬರ ಅತಿ ಮುಖ್ಯವಾದ ಪೋಷಕಾಂಶ ಹೊಂದಿರುತ್ತದೆ (1-1.5% ಸಾರಜನಕ, 0.8% ರಂಜಕ, 0.7% ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತದೆ). ಬೆಳೆಯ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ರೈತರಿಗೆ ಲಾಭಗಳು:

  • ಮಣ್ಣಿನ ಫಲವತ್ತತೆ ಹೆಚ್ಚಿಸುತ್ತದೆ.
  • ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.
  • ಕೀಟಗಳ ಬಾಧೆಯಿಂದ ರಕ್ಷಣೆ ಹಾಗೂ ಬೆಳೆಗಳಿಗೆ ನಷ್ಟವನ್ನು ಕಡಿಮೆ ಮಾಡುತ್ತದೆ.
  • ಬೆಳೆಗಳ ಉತ್ಪನ್ನಗಳು ಅತೀ ಉತ್ತಮ ಹಾಗೂ ಯೋಗ್ಯವಾಗಿದ್ದು, ಹೆಚ್ಚಿನ ರುಚಿ ಹೊಂದಿರುತ್ತವೆ.
  • ಬೆಳೆಗಳು ಉತ್ತಮವಾಗಿದ್ದು, ಹೆಚ್ಚಿನ ಬೆಲೆ ಪಡೆಯುತ್ತವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

6 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

7 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

8 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

11 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

22 hours ago