ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

January 17, 2026
8:07 AM
"ಉಳಿದ ಇಡ್ಲಿಯಿಂದ ಏನು ಮಾಡೋದು?” ಇಲ್ಲಿದೆ ನೋಡಿ ರೆಸಿಪಿ..

ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:

  • ಇಡ್ಲಿ – 3/4 ಕಪ್ (ಚೂರು ಮಾಡಿ)

  • ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)

  • ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)

  • ಆಲೂಗಡ್ಡೆ – 1/4 ಕಪ್ (ತುರಿದ)

  • ಕಡಲೆ ಹಿಟ್ಟು – 1/2 ಕಪ್

  • ಗರಂ ಮಸಾಲಾ – 1 ಚಮಚ

  • ಕಿಚನ್ ಕಿಂಗ್ ಮಸಾಲಾ – 1 ಚಮಚ

  • ಜೀರಿಗೆ ಪುಡಿ – ಸ್ವಲ್ಪ

  • ಉಪ್ಪು – ರುಚಿಗೆ ತಕ್ಕಷ್ಟು

  • ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು

ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.

  2. ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.

  3. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.

  4. ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.

  5. ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.

  6. ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.

ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಯುವಶಕ್ತಿ ದಿಕ್ಕುತಪ್ಪದಿರಲು ಹಿರಿಯರ ಮಾರ್ಗದರ್ಶನವೇ ದೀಪಸ್ತಂಭ
March 13, 2026
7:02 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror