Advertisement
ಸವಿರುಚಿ

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

Share

ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:

  • ಇಡ್ಲಿ – 3/4 ಕಪ್ (ಚೂರು ಮಾಡಿ)

  • ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)

  • ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)

  • ಆಲೂಗಡ್ಡೆ – 1/4 ಕಪ್ (ತುರಿದ)

  • ಕಡಲೆ ಹಿಟ್ಟು – 1/2 ಕಪ್

  • ಗರಂ ಮಸಾಲಾ – 1 ಚಮಚ

  • ಕಿಚನ್ ಕಿಂಗ್ ಮಸಾಲಾ – 1 ಚಮಚ

  • ಜೀರಿಗೆ ಪುಡಿ – ಸ್ವಲ್ಪ

  • ಉಪ್ಪು – ರುಚಿಗೆ ತಕ್ಕಷ್ಟು

  • ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು

ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.

  2. ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.

  3. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.

  4. ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.

  5. ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.

  6. ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.

ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

22 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

22 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago