Advertisement
ಸವಿರುಚಿ

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

Share

ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:

  • ಇಡ್ಲಿ – 3/4 ಕಪ್ (ಚೂರು ಮಾಡಿ)

  • ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)

  • ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)

  • ಆಲೂಗಡ್ಡೆ – 1/4 ಕಪ್ (ತುರಿದ)

  • ಕಡಲೆ ಹಿಟ್ಟು – 1/2 ಕಪ್

  • ಗರಂ ಮಸಾಲಾ – 1 ಚಮಚ

  • ಕಿಚನ್ ಕಿಂಗ್ ಮಸಾಲಾ – 1 ಚಮಚ

  • ಜೀರಿಗೆ ಪುಡಿ – ಸ್ವಲ್ಪ

  • ಉಪ್ಪು – ರುಚಿಗೆ ತಕ್ಕಷ್ಟು

  • ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು

ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.

  2. ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.

  3. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.

  4. ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.

  5. ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.

  6. ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.

ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

10 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

14 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago