Advertisement
ಸವಿರುಚಿ

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

Share

ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:

  • ಇಡ್ಲಿ – 3/4 ಕಪ್ (ಚೂರು ಮಾಡಿ)

  • ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)

  • ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)

  • ಆಲೂಗಡ್ಡೆ – 1/4 ಕಪ್ (ತುರಿದ)

  • ಕಡಲೆ ಹಿಟ್ಟು – 1/2 ಕಪ್

  • ಗರಂ ಮಸಾಲಾ – 1 ಚಮಚ

  • ಕಿಚನ್ ಕಿಂಗ್ ಮಸಾಲಾ – 1 ಚಮಚ

  • ಜೀರಿಗೆ ಪುಡಿ – ಸ್ವಲ್ಪ

  • ಉಪ್ಪು – ರುಚಿಗೆ ತಕ್ಕಷ್ಟು

  • ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು

ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.

  2. ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.

  3. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.

  4. ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.

  5. ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.

  6. ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.

ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago