Advertisement
ಸವಿರುಚಿ

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

Share

ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:

  • ಇಡ್ಲಿ – 3/4 ಕಪ್ (ಚೂರು ಮಾಡಿ)

  • ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)

  • ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)

  • ಆಲೂಗಡ್ಡೆ – 1/4 ಕಪ್ (ತುರಿದ)

  • ಕಡಲೆ ಹಿಟ್ಟು – 1/2 ಕಪ್

  • ಗರಂ ಮಸಾಲಾ – 1 ಚಮಚ

  • ಕಿಚನ್ ಕಿಂಗ್ ಮಸಾಲಾ – 1 ಚಮಚ

  • ಜೀರಿಗೆ ಪುಡಿ – ಸ್ವಲ್ಪ

  • ಉಪ್ಪು – ರುಚಿಗೆ ತಕ್ಕಷ್ಟು

  • ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು

ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.

  2. ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.

  3. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.

  4. ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.

  5. ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.

  6. ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.

ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

2 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

2 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

4 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

5 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

6 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

6 hours ago