Advertisement
Opinion

ಆರೋಗ್ಯಕ್ಕೆ ಒಳ್ಳೆಯದೆಂದು ತರಕಾರಿ ತಿಂದಿರಿ ಜೋಕೆ…! | ಹೊಟ್ಟೆಯೊಳಗೆ ಸೇರುತ್ತಿದೆ ಹೆಚ್ಚು ವಿಷ…! |

Share

ಮುಟ್ಟಿದ್ದೆಲ್ಲಾ ಚಿನ್ನವಾಗುವ ವರ ಪಡೆದ ಕತೆಯನ್ನು ಕೇಳಿದ್ದೀರಲ್ಲಾ? ಕತೆಯಲ್ಲಿ ಆ ವರವೇ ಶಾಪವಾಗಿ ಅವನ ನಾಶಕ್ಕೆ ಕಾರಣವಾಗುವುದೂ ತಮಗೆ ಗೊತ್ತಿದೆ…!. ಇಂದು ಮನುಷ್ಯನ ಕತೆಯೂ ಅದೇ ಆಗಿದೆ. ಮುಟ್ಟಿದ್ದು ಚಿನ್ನವಾಗದೆ ವಿಷವಾಗಿ(poison) ಅವನ ಹೊಟ್ಟೆ ಸೇರುತ್ತಿದೆ. ರಕ್ತ ಹೀನತೆಯೇ? ಹೆಚ್ಚು , ಹೆಚ್ಚು ತರಕಾರಿ(vegetables) ತಿನ್ನಿ ಎನ್ನುವ ಕಾಲವೂ ಹೋಯಿತು. ಡೆಕ್ಕನ್ ಹೆರಾಲ್ಡ್‌ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದೆ…  

Advertisement
Advertisement

ಬೆಂಗಳೂರಿನಲ್ಲಿ  ದೊರಕುವ ಹೆಚ್ಚಿನ ತರಕಾರಿಗಳಲ್ಲಿ ಮಿತಿಯನ್ನು ಮೀರಿ ಭಾರ ಲೋಹಗಳು ಇರುವುದನ್ನು ಗುರುತಿಸಲಾಗಿದೆ. ಇದಕ್ಕೆ ಕಾರಣ? ತರಕಾರಿ ಬೆಳೆಯಲು ಬಳಸುತ್ತಿರುವ ನೀರಿನಲ್ಲಿನ ಸಮಸ್ಯೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳು ಬೆಂಗಳೂರು ನಗರಕ್ಕೆ ತರಕಾರಿಯನ್ನು ಸರಬರಾಜು ಮಾಡುತ್ತವೆ. ಈ ತರಕಾರಿ ಬೆಳೆಯಲು ನೀರು? ನಗರಸಾರ ತುಂಬಿದ ಬೆಂಗಳೂರು ನಗರದ ಕೊಳಚೆ ನೀರು .

ಬೆಂಗಳೂರಿನ Environment Management and Policy Research Institute  20 ಮಳಿಗೆಗಳಿಂದ 400 ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಐದು ಉನ್ನತ  ಸೂಪರ್‌ಮಾರ್ಕೆಟ್‌ಗಳು, ಐದು ಸ್ಥಳೀಯ ಮಾರುಕಟ್ಟೆಗಳಿಂದ ಸಂಗ್ರಹಿಸಿ ಮಾಡಿದ ಪರೀಕ್ಷೆಯಲ್ಲಿ ಇದು ಕಂಡಿದೆ. ಈ ತರಕಾರಿಗಳನ್ನು ಸೂಪರ್ ಮಾರ್ಕೆಟ್ ಗಳಿಂದ ಹಿಡಿದು ತಳ್ಳುವ ಗಾಡಿಯವರಗೆ , ಸಾವಯವ ಮಳಿಗೆಗಳು, ಹಾಪ್‌ ಕಾಮ್‌ ಮಳಿಗೆಗಳು ಹೀಗೆ ವಿವಿದೆಡೆಯಿಂದ ಸಂಗ್ರಹಿಸಲಾಗಿದೆ. ಫಲಿತಾಂಶದಲ್ಲಿ ಕಂಡುಬಂದ ಮಾಹಿತಿ  ಗಾಬರಿ ಮತ್ತು ಭಯವನ್ನು ಉಂಟುಮಾಡುತ್ತದೆ.  ಇದರಲ್ಲಿ 10 ತರಕಾರಿ ಮಿತಿಗಿಂತ ಹೆಚ್ಚು ವಿಷದ ಅಂಶ ಕಂಡುಬಂದಿದೆ. ಅಂದರೆ ವಿಷವನ್ನೇ ತಿನ್ನುತ್ತಿದ್ದೀವೇನೋ ! ಕ್ಯಾಡ್ಮಿಯಂ ಅತ್ಯಂತ ವಿಷಕಾರಿ ಲೋಹ 0.2 ಎಂಜಿ ಇರಬಹುದಾದ ಕಡೆ ಸುಮಾರು 50 ಎಂಜಿ ಇದ್ದು ಅಂದರೆ 25,000 ಪಟ್ಟು ಹೆಚ್ಚಿದೆ.

ಹಾಗೆಯೇ ನಮಗೆಲ್ಲರಿಗೂ ತಿಳಿದಿರುವಂತೆ ಸೀಸ ಕೂಡ ಅಪಾಯಕಾರಿ ಮತ್ತು ವಿಷಕಾರಿ ಅದು 4000 ಪಟ್ಟು ಹೆಚ್ಚಿದೆ. ಸೊಪ್ಪುಗಳು ಈ ಭಾರದ ಲೋಹಗಳನ್ನು ಹೆಚ್ಚು ಹಿಡಿದಿಡುತ್ತವೆ , ಎಂಬುದು ಪರೀಕ್ಷೆಯಿಂದ ಕಂಡುಬಂದಿದೆ.ಹಾಗಾಗಿ ಆರೋಗ್ಯಕ್ಕಾಗಿ ಸೊಪ್ಪನ್ನು ಬಳಸುವ ಮುಂಚೆ ಒಮ್ಮೆ ಯೋಚಿಸಿ, ಇದು ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದೆ ಇರುತ್ತದೆಯೇ? ನಾವು ನೋಡ ನೋಡುತ್ತಿದ್ದಂತೆ ಕ್ಯಾನ್ಸರ್ ರೋಗದ ಪ್ರಮಾಣ ಎಷ್ಟೊಂದು ಹೆಚ್ಚಾಗಿ ಹೋಯಿತು… ಎಲ್ಲೋ ಅಪರೂಪಕ್ಕೆ ಕೇಳಿ ಬರುತ್ತಿದ್ದ ಕಾಯಿಲೆ ಇಂದು ಸರ್ವೇಸಾಮಾನ್ಯವಾಗಿ ಹೋಗಿದೆ. ಅದು ರೋಗಿಗೆ ಮತ್ತು ಕುಟುಂಬಕ್ಕೆ ತರುತ್ತಿರುವ ಹಿಂಸೆ ಅಷ್ಟಿಷ್ಟಲ್ಲ.

(ಮೂಲಮಾಹಿತಿ –  ಸಂತೋಷ, ಕೌಲಗಿ ಹಾಗೂ ಡೆಕ್ಕನ್‌ ಹೆರಾಲ್ಡ್)

Most of the vegetables available in Bangalore have been found to contain heavy metals beyond the limit. The reason for this? Problem with water used to grow vegetables. Bengaluru, Kolar, Chikkaballapur, Ramanagara districts supply vegetables to Bangalore city. Water to grow this vegetable? Sewage water of Bangalore city full of city sap.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

42 minutes ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago