ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೇಕಿದೆ ECG Telemedicine ಯಂತ್ರ | ಮಂಗಳೂರಿನ ಖ್ಯಾತ ಹೃದಯತಜ್ಞ ಡಾ.ಪದ್ಮನಾಭ ಕಾಮತ್‌ ಅಭಿಮತ |

March 17, 2023
2:05 PM

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ECG Telemedicine ಯಂತ್ರ ಸ್ಥಾಪಿಸುವ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಅಗತ್ಯ ಇದೆ. ಈ ಬಗ್ಗ ಧಾರ್ಮಿಕ ದತ್ತಿ ಸಚಿವಾಲಯ ಗಮನಹರಿಸಬೇಕು ಎಂದು ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

ಅನೇಕ ಜನರಿಗೆ ಚಿಕಿತ್ಸೆ ನೀಡುವ ಹಾಗೂ ಉಚಿತ ವೈದ್ಯಕೀಯ ಸಲಹೆಯನ್ನು ನೀಡುತ್ತಾ ಸಾಮಾಜಿಕ ಚಟುವಟಿಕೆ ಅದರಲ್ಲೂ ಹೃದ್ರೋಗಕ್ಕೆ ಸಂಬಂಧಿಸಿ ಗ್ರಾಮೀಣ ಭಾಗದಲ್ಲೂ ಜಾಗೃತಿ ಮೂಡಿಸುತ್ತಿರುವ ಮಂಗಳೂರಿನ ಡಾ.ಪದ್ಮನಾಭ ಕಾಮತ್‌ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಕ್ಷಣವೇ ECG Telemedicine ಯಂತ್ರ ಸ್ಥಾಪಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಗೆ ಹೃದಯಾಘಾತವಾಯಿತು .ತಕ್ಷಣವೇ ಅಂಬುಲೆನ್ಸ್‌ ಮೂಲಕ ಮಂಗಳೂರು ತಲುಪುವಷ್ಟರಲ್ಲೇ ಕಾಲ ಮೀರಿ ಹೋಗಿತ್ತು . ಅವರು ತಮ್ಮ ಸ್ವಂತ ವಾಹನದಲ್ಲಿ ದೇಗುಲಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಬಂದಿರುವ ವ್ಯಕ್ತಿಗೆ ಈ ರೀತಿ ಆದಾಗ ತಕ್ಷಣಕ್ಕೆ ವ್ಯವಸ್ಥೆ ನೀಡುವ ಆರೋಗ್ಯ ವ್ಯವಸ್ಥೆ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಇಂದು ಪುನೀತ್ ರಾಜಕುಮಾರ್ ಅವರ ಹುಟ್ಟಿದ ದಿನ . ಇವರ ಸ್ಮರಣಾರ್ಥ CAD ಮಂಗಳೂರು ಸಂಸ್ಥೆಯ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸ್ತಾಪಿತ ಹೆಲ್ತ್ ಸೆಂಟರ್ ಗೆ ECG Telemedicine ಯಂತ್ರ ಯಂತ್ರ ಕೊಡುವ ನಿರ್ಧಾರ ಮಾಡಲಾಗಿದೆ. ಇದು ದೇವಸ್ಥಾನದ ಆವರಣದಲ್ಲೇ ಇಡಬೇಕೆಂದು ಎಂದು ಡಾ.ಪದ್ಮನಾಭ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror