ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ECG Telemedicine ಯಂತ್ರ ಸ್ಥಾಪಿಸುವ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಅಗತ್ಯ ಇದೆ. ಈ ಬಗ್ಗ ಧಾರ್ಮಿಕ ದತ್ತಿ ಸಚಿವಾಲಯ ಗಮನಹರಿಸಬೇಕು ಎಂದು ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.
ಅನೇಕ ಜನರಿಗೆ ಚಿಕಿತ್ಸೆ ನೀಡುವ ಹಾಗೂ ಉಚಿತ ವೈದ್ಯಕೀಯ ಸಲಹೆಯನ್ನು ನೀಡುತ್ತಾ ಸಾಮಾಜಿಕ ಚಟುವಟಿಕೆ ಅದರಲ್ಲೂ ಹೃದ್ರೋಗಕ್ಕೆ ಸಂಬಂಧಿಸಿ ಗ್ರಾಮೀಣ ಭಾಗದಲ್ಲೂ ಜಾಗೃತಿ ಮೂಡಿಸುತ್ತಿರುವ ಮಂಗಳೂರಿನ ಡಾ.ಪದ್ಮನಾಭ ಕಾಮತ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಕ್ಷಣವೇ ECG Telemedicine ಯಂತ್ರ ಸ್ಥಾಪಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಗೆ ಹೃದಯಾಘಾತವಾಯಿತು .ತಕ್ಷಣವೇ ಅಂಬುಲೆನ್ಸ್ ಮೂಲಕ ಮಂಗಳೂರು ತಲುಪುವಷ್ಟರಲ್ಲೇ ಕಾಲ ಮೀರಿ ಹೋಗಿತ್ತು . ಅವರು ತಮ್ಮ ಸ್ವಂತ ವಾಹನದಲ್ಲಿ ದೇಗುಲಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಬಂದಿರುವ ವ್ಯಕ್ತಿಗೆ ಈ ರೀತಿ ಆದಾಗ ತಕ್ಷಣಕ್ಕೆ ವ್ಯವಸ್ಥೆ ನೀಡುವ ಆರೋಗ್ಯ ವ್ಯವಸ್ಥೆ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಇಂದು ಪುನೀತ್ ರಾಜಕುಮಾರ್ ಅವರ ಹುಟ್ಟಿದ ದಿನ . ಇವರ ಸ್ಮರಣಾರ್ಥ CAD ಮಂಗಳೂರು ಸಂಸ್ಥೆಯ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸ್ತಾಪಿತ ಹೆಲ್ತ್ ಸೆಂಟರ್ ಗೆ ECG Telemedicine ಯಂತ್ರ ಯಂತ್ರ ಕೊಡುವ ನಿರ್ಧಾರ ಮಾಡಲಾಗಿದೆ. ಇದು ದೇವಸ್ಥಾನದ ಆವರಣದಲ್ಲೇ ಇಡಬೇಕೆಂದು ಎಂದು ಡಾ.ಪದ್ಮನಾಭ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…