Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೇಕಿದೆ ECG Telemedicine ಯಂತ್ರ | ಮಂಗಳೂರಿನ ಖ್ಯಾತ ಹೃದಯತಜ್ಞ ಡಾ.ಪದ್ಮನಾಭ ಕಾಮತ್‌ ಅಭಿಮತ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ECG Telemedicine ಯಂತ್ರ ಸ್ಥಾಪಿಸುವ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಅಗತ್ಯ ಇದೆ. ಈ ಬಗ್ಗ ಧಾರ್ಮಿಕ ದತ್ತಿ ಸಚಿವಾಲಯ ಗಮನಹರಿಸಬೇಕು ಎಂದು ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

ಅನೇಕ ಜನರಿಗೆ ಚಿಕಿತ್ಸೆ ನೀಡುವ ಹಾಗೂ ಉಚಿತ ವೈದ್ಯಕೀಯ ಸಲಹೆಯನ್ನು ನೀಡುತ್ತಾ ಸಾಮಾಜಿಕ ಚಟುವಟಿಕೆ ಅದರಲ್ಲೂ ಹೃದ್ರೋಗಕ್ಕೆ ಸಂಬಂಧಿಸಿ ಗ್ರಾಮೀಣ ಭಾಗದಲ್ಲೂ ಜಾಗೃತಿ ಮೂಡಿಸುತ್ತಿರುವ ಮಂಗಳೂರಿನ ಡಾ.ಪದ್ಮನಾಭ ಕಾಮತ್‌ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಕ್ಷಣವೇ ECG Telemedicine ಯಂತ್ರ ಸ್ಥಾಪಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಗೆ ಹೃದಯಾಘಾತವಾಯಿತು .ತಕ್ಷಣವೇ ಅಂಬುಲೆನ್ಸ್‌ ಮೂಲಕ ಮಂಗಳೂರು ತಲುಪುವಷ್ಟರಲ್ಲೇ ಕಾಲ ಮೀರಿ ಹೋಗಿತ್ತು . ಅವರು ತಮ್ಮ ಸ್ವಂತ ವಾಹನದಲ್ಲಿ ದೇಗುಲಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಬಂದಿರುವ ವ್ಯಕ್ತಿಗೆ ಈ ರೀತಿ ಆದಾಗ ತಕ್ಷಣಕ್ಕೆ ವ್ಯವಸ್ಥೆ ನೀಡುವ ಆರೋಗ್ಯ ವ್ಯವಸ್ಥೆ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಇಂದು ಪುನೀತ್ ರಾಜಕುಮಾರ್ ಅವರ ಹುಟ್ಟಿದ ದಿನ . ಇವರ ಸ್ಮರಣಾರ್ಥ CAD ಮಂಗಳೂರು ಸಂಸ್ಥೆಯ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸ್ತಾಪಿತ ಹೆಲ್ತ್ ಸೆಂಟರ್ ಗೆ ECG Telemedicine ಯಂತ್ರ ಯಂತ್ರ ಕೊಡುವ ನಿರ್ಧಾರ ಮಾಡಲಾಗಿದೆ. ಇದು ದೇವಸ್ಥಾನದ ಆವರಣದಲ್ಲೇ ಇಡಬೇಕೆಂದು ಎಂದು ಡಾ.ಪದ್ಮನಾಭ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

2 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

3 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

12 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

13 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

22 hours ago