ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

November 6, 2024
10:41 PM

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror