ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

November 6, 2024
10:41 PM

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

Advertisement

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |
March 24, 2025
9:44 PM
by: ದ ರೂರಲ್ ಮಿರರ್.ಕಾಂ
ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು
March 24, 2025
8:52 PM
by: ದ ರೂರಲ್ ಮಿರರ್.ಕಾಂ
ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
March 24, 2025
8:20 PM
by: ದ ರೂರಲ್ ಮಿರರ್.ಕಾಂ
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ
March 24, 2025
8:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror