Advertisement
MIRROR FOCUS

ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

Share

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago