Advertisement
MIRROR FOCUS

ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

Share

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

3 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

6 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

10 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

13 hours ago