Advertisement
MIRROR FOCUS

ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

Share

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

5 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

5 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

12 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

14 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

21 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

23 hours ago