Advertisement
MIRROR FOCUS

ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

Share

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago