Advertisement
MIRROR FOCUS

ಭಾರತದಲ್ಲಿ ಆರ್ಥಿಕ ಚಟುವಟಿಕೆ ಪ್ರಬಲ | ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

Share

ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದರು.

ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ  ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ.  ಸೆಪ್ಟೆಂಬರ್‌ನಲ್ಲಿ  ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ.  ಆದರೆ  ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್‌ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್‌ ದಾಸ್ ಹೇಳಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು  ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು  ಅವಲಂಬಿತವಾಗಿದೆ ಎಂದ ಶಕ್ತಿಕಾಂತ್‌ ದಾಸ್‌, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

7 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

8 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago