ಭಾರತದಲ್ಲಿ ಆರ್ಥಿಕ ಚಟುವಟಿಕೆಯು ಪ್ರಬಲವಾಗಿದೆ, ಕೃಷಿ ಮತ್ತು ಸೇವಾ ಕ್ಷೇತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು.
ಅವರು ದೆಹಲಿಯಲ್ಲಿ ನಡೆದ ಬ್ಯುಸಿನೆಸ್ ಸ್ಟ್ಯಾಂಡರ್ಡ್ BSFI ಶೃಂಗಸಭೆಯಲ್ಲಿ ಮಾತನಾಡಿದರು. ಭಾರತದಲ್ಲಿ ಹಣದುಬ್ಬರವು ಇತ್ತೀಚೆಗೆ ಅಸ್ಥಿರವಾಗಿದೆ. ಸೆಪ್ಟೆಂಬರ್ನಲ್ಲಿ ಹಣದುಬ್ಬರವು ಶೇಕಡಾ 5.5 ಕ್ಕೆ ದಾಖಲಾಗಿದೆ. ತರಕಾರಿ ಬೆಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 36ರಷ್ಟು ಹೆಚ್ಚಳವಾಗುತ್ತಿರುವುದೂ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ, ಶೇಕಡಾ 9.24 ರಷ್ಟು ಹಣದುಬ್ಬರಕ್ಕೆ ಆಹಾರ ಪ್ರಮುಖ ಕಾರಣವಾಗಿದೆ. ಆದರೆ ಹಣದುಬ್ಬರದ ಒತ್ತಡಗಳು ಮತ್ತು ಬಾಹ್ಯ ಸವಾಲುಗಳ ಹೊರತಾಗಿಯೂ, ಆರ್ಬಿಐ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.
ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು ಹಣಕಾಸು ನೀತಿ ಬೆಂಬಲಕ್ಕೆ ಸಂಬಂಧಿಸಿದಂತೆ ಚೀನಾದಿಂದ ಘೋಷಣೆಗಳು, ಈ ಎರಡು ಅಂತಾರಾಷ್ಟ್ರೀಯ ಘಟನೆಗಳ ಮೇಲೆ ಭಾರತದ ಹಣಕಾಸು ಮಾರುಕಟ್ಟೆಯು ಅವಲಂಬಿತವಾಗಿದೆ ಎಂದ ಶಕ್ತಿಕಾಂತ್ ದಾಸ್, ಅಮೆರಿಕದಲ್ಲಿ ಯಾರೇ ಜಯ ಗಳಿಸಿದರೂ ಉಭಯ ದೇಶಗಳ ನಡುವಿನ ಸಂಬಂಧ ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…