2023-24ರ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆ ದಾಖಲೆಯು ಆರ್ಥಿಕತೆಯ ಸ್ಥಿತಿ ಮತ್ತು 2023-24 ರ (ಏಪ್ರಿಲ್-ಮಾರ್ಚ್) ವಿವಿಧ ಸೂಚಕಗಳ ಬಗ್ಗೆ ಒಳನೋಟಗಳನ್ನು ನೀಡುತ್ತದೆ.ಜಿಡಿಪಿ ದರ, ಹಣಕಾಸು ಪರಿಸ್ಥಿತಿ ಇತ್ಯಾದಿ ಬಗ್ಗೆ ಆರ್ಥಿಕ ಸಮೀಕ್ಷೆ ಆಶಾದಾಯಕವೆನಿಸುವ ಚಿತ್ರಣ ನೀಡಿದೆ. ಆರ್ಥಿಕ ಬೆಳವಣಿಗೆಯ ಓಟಕ್ಕೆ ತಡೆಯಾಗಿರುವ ಕೆಲ ಅಂಶಗಳ ಬಗ್ಗೆಯೂ ಈ ಸಮೀಕ್ಷೆ ಎಚ್ಚರಿಸುವ ಕೆಲಸ ಮಾಡಿದೆ.
ದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಳ್ಳಬೇಕಾದರೆ 2030ರವರೆಗೂ ಕೃಷಿಯೇತರ ಕ್ಷೇತ್ರದಲ್ಲಿ ಪ್ರತೀ ವರ್ಷ ಸರಾಸರಿಯಾಗಿ 78.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಅವಶ್ಯಕತೆ ಇದೆ ಎಂದು ಆರ್ಥಿಕ ಸಮೀಕ್ಷೆ ಅಭಿಪ್ರಾಯಪಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ವಿನಿಮಯ ಮೀಸಲು ಹೊಂದಿರುವ ಜಗತ್ತಿನ ಪ್ರಮುಖ ರಾಷ್ಟ್ರಗಳಿಗೆ ಹೋಲಿಸಿದರೆ, ಇತ್ತೀಚೆಗೆ ಮುಗಿದ 2023-24ರ ಹಣಕಾಸು ವರ್ಷದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ಅತ್ಯಧಿಕ ಏರಿಕೆಯಾಗಿದೆ ಎಂದು ಸೋಮವಾರ ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆ ಹೇಳಿದೆ.
2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 7ರಷ್ಟು ಬೆಳೆಯಬಹುದು ಎಂದು ಐಎಂಎಫ್, ಎಡಿಬಿ ಇತ್ಯಾದಿ ಗ್ಲೋಬಲ್ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ.ಆರ್ಥಿಕ ಸಮೀಕ್ಷೆಯು ಹಣದುಬ್ಬರದ ಬಗ್ಗೆ ತೀರಾ ಆಶಾದಾಯಕವಾಗಿಲ್ಲ. ಜಾಗತಿಕ ವಿದ್ಯಮಾನಗಳು ಮತ್ತು ಪ್ರತಿಕೂಲ ಹವಾಮಾನವು ಹಣದುಬ್ಬರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿರುವ ಈ ವರದಿಯ ಪ್ರಕಾರ, 2024-25ರಲ್ಲಿ ಹಣದುಬ್ಬರ ದರ ಶೇ. 4.5ರಷ್ಟು ಇರಬಹುದು.
ಸಮೀಕ್ಷೆಯ ಕೆಲವು ಅಂಶಗಳು ಹೀಗಿದೆ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…