Advertisement
ಸುದ್ದಿಗಳು

ಲೆಕ್ಕ ತಪ್ಪಿದ ಅಂಕ | ಎಕನಾಮಿಕ್ಸ್ ಪರೀಕ್ಷೆಯಲ್ಲಿ 27 ಅಂಕ ಢಮಾರ್…!‌ |‌ ವಿದ್ಯಾರ್ಥಿನಿಯ ಆತಂಕಕ್ಕೆ ಯಾರು ಹೊಣೆ ? |

Share

ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು  ಎಕನಾಮಿಕ್ಸ್‌ ಉಪನ್ಯಾಸಕರೊಬ್ಬರು.ಆದರೆ ಈ ಎಡವಟ್ಟು ವಿದ್ಯಾರ್ಥಿನಿಯೊಬ್ಬ ಭವಿಷ್ಯದ ಮೇಲೆ ಹೊಡೆತ ಬೀಳುತ್ತಿತ್ತು. ಆದರೆ ಏನೋ ಎಡವಟ್ಟಾಗಿದೆ ಎಂದು ವಿದ್ಯಾರ್ಥಿನಿಗೆ ಪಕ್ಕಾ ಗೊತ್ತಾದ ಕಾರಣ ಧೈರ್ಯದಿಂದ ಇದ್ದರು. ಈಗ ಉತ್ತರ ಸಿಕ್ಕಿತು. 27 ಅಂಕವನ್ನು ಕೂಡಿಸಲೇ ಇಲ್ಲ…!. ಹೀಗಾಗಿ ಈಗ ವಿದ್ಯಾರ್ಥಿನಿಯ ಅಂಕ 97.

ಹೌದು. ಈ ಎಡವಟ್ಟು ಆಗಿರುವುದು ಕುಕ್ಕೆ ಸುಬ್ರಹ್ಮಣ್ಯದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬಿಂದು ಭಾರ್ಗವಿ ಅವರಿಗೆ. ರಾಧಾಕೃಷ್ಣ ಭಟ್‌ ಅಡ್ಕ ಗುತ್ತಿಗಾರು ಇವರ ಪುತ್ರಿಯಾಗಿರುವ ಬಿಂದು ಭಾರ್ಗವಿ  ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಎಕನಾಮಿಕ್ಸ್‌ನಲ್ಲಿ  95 ರಿಂದ 97 ಅಂಕದ ನಿರೀಕ್ಷೆಯಲ್ಲಿದ್ದರು. ಆದರೆ ಫಲಿತಾಂಶ ಬಂದಾಗ ಕೇವಲ 70 ಅಂಕ. ವಿದ್ಯಾರ್ಥಿನಿಗೆ ಒಮ್ಮೆ ಆತಂಕವಾಗಿತ್ತು. ಇಷ್ಟೆಲ್ಲಾ ಬರೆದು ಹೀಗೇಕಾಯಿತು ಎಂದು.ಇದು ಎಕನಾಮಿಕ್ಸ್‌ ಬೇರೆ. ಲೆಕ್ಕಗಳು ಪಕ್ಕಾ ಇದ್ದರೆ ಅಂಕವೂ ಪಕ್ಕಾವೇ. ಹಾಗಾಗಿ ಎಲ್ಲವೂ ಬರೆದ ನಂತರವೂ ಹೀಗೇಕಾಯಿತು ಎಂದು ಆತಂಕಕ್ಕೆ ಒಳಗಾದಳು. ಆಗ ವಿದ್ಯಾರ್ಥಿನಿಯ ಮನೆಯವರು ಧೈರ್ಯ ತುಂಬಿ ಉತ್ತರ ಪತ್ರಿಕೆಯ ನಕಲು ತಂದಾಗ ಸತ್ಯ ತಿಳಿಯಿತು. 27 ಅಂಕವನ್ನು ಸೇರ್ಪಡೆ ಮಾಡಲೇಇಲ್ಲ..!. ಹೀಗಾಗಿ ವಿದ್ಯಾರ್ಥಿನಿಗೆ ಈಗ ಅಂಕ 97.

ಇಲಾಖೆಗಳು ಇಂತಹ ಎಡವಟ್ಟುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪರೀಕ್ಷೆ ಚೆನ್ನಾಗಿ ಬರೆದು ತಪ್ಪಾಗಿ ಅಂಕ ಕೂಡಿಸಿ ಫಲಿತಾಂಶ ಪ್ರಕಟವಾಗಿ ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾದರೆ ಯಾರು ಹೊಣೆ. ಹೀಗಾಗಿ ಇಂತಹ ಗಂಭೀರವಾದ ಎಡವಟ್ಟುಗಳು ಆಗದಂತೆ ಇಲಾಖೆಗಳು ಎಚ್ಚರ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಯಾವುದೇ ವಿದ್ಯಾರ್ಥಿಗಳಿಗೆ ಇದೊಂದು ಪಾಠ. ನಿರೀಕ್ಷೆಯಷ್ಟು ಅಂಕ ಬಾರದೇ ಇದ್ದಾಗ ಯಾವುದೇ ಆತಂಕಕ್ಕೆ ಒಳಗಾಗದೆ ಪರಿಶೀಲನೆ ನಡೆಸುವುದು  ಉತ್ತಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

17 minutes ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

33 minutes ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago