Advertisement
ಸುದ್ದಿಗಳು

ಲೆಕ್ಕ ತಪ್ಪಿದ ಅಂಕ | ಎಕನಾಮಿಕ್ಸ್ ಪರೀಕ್ಷೆಯಲ್ಲಿ 27 ಅಂಕ ಢಮಾರ್…!‌ |‌ ವಿದ್ಯಾರ್ಥಿನಿಯ ಆತಂಕಕ್ಕೆ ಯಾರು ಹೊಣೆ ? |

Share

ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು  ಎಕನಾಮಿಕ್ಸ್‌ ಉಪನ್ಯಾಸಕರೊಬ್ಬರು.ಆದರೆ ಈ ಎಡವಟ್ಟು ವಿದ್ಯಾರ್ಥಿನಿಯೊಬ್ಬ ಭವಿಷ್ಯದ ಮೇಲೆ ಹೊಡೆತ ಬೀಳುತ್ತಿತ್ತು. ಆದರೆ ಏನೋ ಎಡವಟ್ಟಾಗಿದೆ ಎಂದು ವಿದ್ಯಾರ್ಥಿನಿಗೆ ಪಕ್ಕಾ ಗೊತ್ತಾದ ಕಾರಣ ಧೈರ್ಯದಿಂದ ಇದ್ದರು. ಈಗ ಉತ್ತರ ಸಿಕ್ಕಿತು. 27 ಅಂಕವನ್ನು ಕೂಡಿಸಲೇ ಇಲ್ಲ…!. ಹೀಗಾಗಿ ಈಗ ವಿದ್ಯಾರ್ಥಿನಿಯ ಅಂಕ 97.

ಹೌದು. ಈ ಎಡವಟ್ಟು ಆಗಿರುವುದು ಕುಕ್ಕೆ ಸುಬ್ರಹ್ಮಣ್ಯದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬಿಂದು ಭಾರ್ಗವಿ ಅವರಿಗೆ. ರಾಧಾಕೃಷ್ಣ ಭಟ್‌ ಅಡ್ಕ ಗುತ್ತಿಗಾರು ಇವರ ಪುತ್ರಿಯಾಗಿರುವ ಬಿಂದು ಭಾರ್ಗವಿ  ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಎಕನಾಮಿಕ್ಸ್‌ನಲ್ಲಿ  95 ರಿಂದ 97 ಅಂಕದ ನಿರೀಕ್ಷೆಯಲ್ಲಿದ್ದರು. ಆದರೆ ಫಲಿತಾಂಶ ಬಂದಾಗ ಕೇವಲ 70 ಅಂಕ. ವಿದ್ಯಾರ್ಥಿನಿಗೆ ಒಮ್ಮೆ ಆತಂಕವಾಗಿತ್ತು. ಇಷ್ಟೆಲ್ಲಾ ಬರೆದು ಹೀಗೇಕಾಯಿತು ಎಂದು.ಇದು ಎಕನಾಮಿಕ್ಸ್‌ ಬೇರೆ. ಲೆಕ್ಕಗಳು ಪಕ್ಕಾ ಇದ್ದರೆ ಅಂಕವೂ ಪಕ್ಕಾವೇ. ಹಾಗಾಗಿ ಎಲ್ಲವೂ ಬರೆದ ನಂತರವೂ ಹೀಗೇಕಾಯಿತು ಎಂದು ಆತಂಕಕ್ಕೆ ಒಳಗಾದಳು. ಆಗ ವಿದ್ಯಾರ್ಥಿನಿಯ ಮನೆಯವರು ಧೈರ್ಯ ತುಂಬಿ ಉತ್ತರ ಪತ್ರಿಕೆಯ ನಕಲು ತಂದಾಗ ಸತ್ಯ ತಿಳಿಯಿತು. 27 ಅಂಕವನ್ನು ಸೇರ್ಪಡೆ ಮಾಡಲೇಇಲ್ಲ..!. ಹೀಗಾಗಿ ವಿದ್ಯಾರ್ಥಿನಿಗೆ ಈಗ ಅಂಕ 97.

ಇಲಾಖೆಗಳು ಇಂತಹ ಎಡವಟ್ಟುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪರೀಕ್ಷೆ ಚೆನ್ನಾಗಿ ಬರೆದು ತಪ್ಪಾಗಿ ಅಂಕ ಕೂಡಿಸಿ ಫಲಿತಾಂಶ ಪ್ರಕಟವಾಗಿ ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾದರೆ ಯಾರು ಹೊಣೆ. ಹೀಗಾಗಿ ಇಂತಹ ಗಂಭೀರವಾದ ಎಡವಟ್ಟುಗಳು ಆಗದಂತೆ ಇಲಾಖೆಗಳು ಎಚ್ಚರ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಯಾವುದೇ ವಿದ್ಯಾರ್ಥಿಗಳಿಗೆ ಇದೊಂದು ಪಾಠ. ನಿರೀಕ್ಷೆಯಷ್ಟು ಅಂಕ ಬಾರದೇ ಇದ್ದಾಗ ಯಾವುದೇ ಆತಂಕಕ್ಕೆ ಒಳಗಾಗದೆ ಪರಿಶೀಲನೆ ನಡೆಸುವುದು  ಉತ್ತಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

49 minutes ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 hour ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

10 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

15 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago