Advertisement
ಸುದ್ದಿಗಳು

ಲೆಕ್ಕ ತಪ್ಪಿದ ಅಂಕ | ಎಕನಾಮಿಕ್ಸ್ ಪರೀಕ್ಷೆಯಲ್ಲಿ 27 ಅಂಕ ಢಮಾರ್…!‌ |‌ ವಿದ್ಯಾರ್ಥಿನಿಯ ಆತಂಕಕ್ಕೆ ಯಾರು ಹೊಣೆ ? |

Share

ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು  ಎಕನಾಮಿಕ್ಸ್‌ ಉಪನ್ಯಾಸಕರೊಬ್ಬರು.ಆದರೆ ಈ ಎಡವಟ್ಟು ವಿದ್ಯಾರ್ಥಿನಿಯೊಬ್ಬ ಭವಿಷ್ಯದ ಮೇಲೆ ಹೊಡೆತ ಬೀಳುತ್ತಿತ್ತು. ಆದರೆ ಏನೋ ಎಡವಟ್ಟಾಗಿದೆ ಎಂದು ವಿದ್ಯಾರ್ಥಿನಿಗೆ ಪಕ್ಕಾ ಗೊತ್ತಾದ ಕಾರಣ ಧೈರ್ಯದಿಂದ ಇದ್ದರು. ಈಗ ಉತ್ತರ ಸಿಕ್ಕಿತು. 27 ಅಂಕವನ್ನು ಕೂಡಿಸಲೇ ಇಲ್ಲ…!. ಹೀಗಾಗಿ ಈಗ ವಿದ್ಯಾರ್ಥಿನಿಯ ಅಂಕ 97.

ಹೌದು. ಈ ಎಡವಟ್ಟು ಆಗಿರುವುದು ಕುಕ್ಕೆ ಸುಬ್ರಹ್ಮಣ್ಯದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬಿಂದು ಭಾರ್ಗವಿ ಅವರಿಗೆ. ರಾಧಾಕೃಷ್ಣ ಭಟ್‌ ಅಡ್ಕ ಗುತ್ತಿಗಾರು ಇವರ ಪುತ್ರಿಯಾಗಿರುವ ಬಿಂದು ಭಾರ್ಗವಿ  ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಎಕನಾಮಿಕ್ಸ್‌ನಲ್ಲಿ  95 ರಿಂದ 97 ಅಂಕದ ನಿರೀಕ್ಷೆಯಲ್ಲಿದ್ದರು. ಆದರೆ ಫಲಿತಾಂಶ ಬಂದಾಗ ಕೇವಲ 70 ಅಂಕ. ವಿದ್ಯಾರ್ಥಿನಿಗೆ ಒಮ್ಮೆ ಆತಂಕವಾಗಿತ್ತು. ಇಷ್ಟೆಲ್ಲಾ ಬರೆದು ಹೀಗೇಕಾಯಿತು ಎಂದು.ಇದು ಎಕನಾಮಿಕ್ಸ್‌ ಬೇರೆ. ಲೆಕ್ಕಗಳು ಪಕ್ಕಾ ಇದ್ದರೆ ಅಂಕವೂ ಪಕ್ಕಾವೇ. ಹಾಗಾಗಿ ಎಲ್ಲವೂ ಬರೆದ ನಂತರವೂ ಹೀಗೇಕಾಯಿತು ಎಂದು ಆತಂಕಕ್ಕೆ ಒಳಗಾದಳು. ಆಗ ವಿದ್ಯಾರ್ಥಿನಿಯ ಮನೆಯವರು ಧೈರ್ಯ ತುಂಬಿ ಉತ್ತರ ಪತ್ರಿಕೆಯ ನಕಲು ತಂದಾಗ ಸತ್ಯ ತಿಳಿಯಿತು. 27 ಅಂಕವನ್ನು ಸೇರ್ಪಡೆ ಮಾಡಲೇಇಲ್ಲ..!. ಹೀಗಾಗಿ ವಿದ್ಯಾರ್ಥಿನಿಗೆ ಈಗ ಅಂಕ 97.

ಇಲಾಖೆಗಳು ಇಂತಹ ಎಡವಟ್ಟುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪರೀಕ್ಷೆ ಚೆನ್ನಾಗಿ ಬರೆದು ತಪ್ಪಾಗಿ ಅಂಕ ಕೂಡಿಸಿ ಫಲಿತಾಂಶ ಪ್ರಕಟವಾಗಿ ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾದರೆ ಯಾರು ಹೊಣೆ. ಹೀಗಾಗಿ ಇಂತಹ ಗಂಭೀರವಾದ ಎಡವಟ್ಟುಗಳು ಆಗದಂತೆ ಇಲಾಖೆಗಳು ಎಚ್ಚರ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಯಾವುದೇ ವಿದ್ಯಾರ್ಥಿಗಳಿಗೆ ಇದೊಂದು ಪಾಠ. ನಿರೀಕ್ಷೆಯಷ್ಟು ಅಂಕ ಬಾರದೇ ಇದ್ದಾಗ ಯಾವುದೇ ಆತಂಕಕ್ಕೆ ಒಳಗಾಗದೆ ಪರಿಶೀಲನೆ ನಡೆಸುವುದು  ಉತ್ತಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

3 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

5 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

10 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

20 hours ago