MIRROR FOCUS

#Arecanut | ಮ್ಯಾನ್ಮಾರ್‌ ಗಡಿ ಮೂಲಕ ಅಕ್ರಮ ಅಡಿಕೆ ಸಾಗಾಟ | ಸರ್ಕಾರಕ್ಕೆ 15,000 ಕೋಟಿ ನಷ್ಟದ ಆರೋಪ | ಪ್ರಮುಖ ಆರೋಪಿ ಬಂಧನ | ನಿಲ್ಲಬಹುದೇ ಅಕ್ರಮ ಸಾಗಾಟ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಕೆಲವು ಸಮಯಗಳಿಂದ ಭಾರತ-ಮ್ಯಾನ್ಮಾರ್‌ ಗಡಿಯ ಮೂಲಕ ಅಕ್ರಮವಾಗಿ ವಿದೇಶಿ ಅಡಿಕೆ ಆಮದು ನಡೆಯುತ್ತಿತ್ತು. ಹಲವು ಬಾರಿ ಭಾರೀ ಪ್ರಮಾಣದ ಅಡಿಕೆ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಮೂಲ ಪತ್ತೆ ಮಾಡುತ್ತಿದ್ದರು. ಇದೀಗ ನಾಗಪುರ ಮೂಲದ ವ್ಯಾಪಾರಿಯೊಬ್ಬನನ್ನು ಜಾರಿ ನಿರ್ದೇಶನಾಲಯ (ED)  ಬಂಧಿಸಿದೆ.

Advertisement
Advertisement

ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ಬೇರೆ ದೇಶಗಳಿಂದ ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಾಗಪುರ ಮೂಲದ ವ್ಯಾಪಾರಿ ವಾಸಿಂ ಬಾವ್ಲಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)  ಬಂಧಿಸಿದೆ. ಅವರನ್ನು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 30 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.  ಇದೀಗ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 15,000 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ನಾಗ್ಪುರ ಮತ್ತು ಮುಂಬೈ ಸೇರಿದಂತೆ ಇತರ ಪ್ರದೇಶಗಳಲ್ಲಿನ ಅಡಿಕೆ ವ್ಯಾಪಾರಿಗಳ ಮೇಲೆ ಇಡಿ(ED) ತನಿಖೆ ನಡೆಸುತ್ತಿದೆ.

ಭಾರತ, ಇಂಡೋನೇಷ್ಯಾ ಮತ್ತು ಸಾರ್ಕ್ ದೇಶಗಳಲ್ಲಿ ನೋಂದಾಯಿಸಲಾದ ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡಲಾಗುತ್ತಿತ್ತು. ಇದರ ಜೊತೆಗೆ ಮ್ಯಾನ್ಮಾರ್‌ ಮೂಲಕವೂ ಸತತವಾಗಿ ವಿವಿಧ ಮಾರ್ಗಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು.

ಭಾರತದ ಈಶಾನ್ಯ ರಾಜ್ಯಗಳಾದ  ಮಿಜೋರಾಂ ಮತ್ತು ಮಣಿಪುರ, ತ್ರಿಪುರಾ ಮೂಲಕ ಅಲ್ಲಿನ ಅಡಿಕೆಯ ಜೊತೆ ಸೇರಿಸಿಕೊಂಡು ಮಹಾರಾಷ್ಟ್ರಕ್ಕೆ ಲಾರಿ, ರೈಲು ಮೂಲಕ ತರಲಾಗುತ್ತಿತ್ತು. ಕಳೆದ ವರ್ಷ, ಸಿಬಿಐನ ನಾಗ್ಪುರ ಘಟಕವು ಸಲ್ಲಿಸಿದ ಎಫ್‌ಐಆರ್ ಆಧರಿಸಿ ಇಡಿ(ED) ಹಣ ವರ್ಗಾವಣೆಯ ತನಿಖೆಯನ್ನು ಪ್ರಾರಂಭಿಸಿತ್ತು. ಇದೀಗ ಕಸ್ಟಮ್ಸ್ ಸುಂಕವನ್ನು ತಪ್ಪಿಸುವ ಮೂಲಕ ನಡೆಯುತ್ತಿರುವ ಈ ಪ್ರಕರಣದ ಮೇಲೆ ಇಡಿ ಯ ತನಿಖೆಯು ಕೇಂದ್ರೀಕೃತವಾಗಿದೆ.

ಈ ತನಿಖೆಯ ಸಂದರ್ಭ ಅಡಿಕೆ ಕಳ್ಳಸಾಗಾಣಿಕೆಗೆ ಸಹಕಾರ ನೀಡುವ ನೆಲೆಯಲ್ಲಿ ಅಸ್ಸಾಂನ ಕೆಲವು ಪಕ್ಷಗಳಿಗೆ ಗಣನೀಯ ಮೊತ್ತದ ಹಣವನ್ನು ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ನಂತರ ಅದನ್ನು ಅಡಿಕೆಯ ರೂಪದಲ್ಲಿ  ವಿದೇಶಿ ಅಡಿಕೆ ಆಮದು ಮೂಲಕ ಭರ್ತಿ ಮಾಡಲಾಗಿದೆ ಎಂದೂ ತಿಳಿದುಬಂದಿದೆ. ಭಾರತ ತಲಪಿದ ಬಳಿಕ ನಕಲಿ ಬಿಲ್‌ ಮೂಲಕ ನಾಗಪುರಕ್ಕೆ ಅಡಿಕೆ ರವಾನೆಯಾಗುತ್ತಿತ್ತು.

Advertisement

ಮುಂಬಯಿಗೆ ಅಡಿಕೆ ತಲಪಿದ ಬಳಿಕ ಅಲ್ಲಿಂದ  ಮಾರಾಟ ಮತ್ತು ಖರೀದಿಗೆ ಅನುಕೂಲವಾಗುವಂತೆ ನಕಲಿ ಇನ್‌ವಾಯ್ಸ್‌ಗಳನ್ನು ತಯಾರಿಸಲಾಗುತ್ತಿತ್ತು ಎಂದು ಇಡಿ ಪ್ರಾಥಮಿಕ ಮಾಹಿತಿ ನೀಡಿದೆ. ಬಂಧಿತ  ಆರೋಪಿ ಆಗಾಗ್ಗೆ ಫೋನ್‌ಗಳನ್ನು ಬದಲಾಯಿಸುವ ಮೂಲಕ, ಸಮನ್ಸ್‌ಗಳನ್ನು ನಿರ್ಲಕ್ಷಿಸುವ ಮೂಲಕ ಇಡಿ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದ. ಇದಕ್ಕೆ ಕೆಲವು ಪ್ರಮುಖ ರಾಜಕೀಯ ನಾಯಕರ ಕೈವಾಡವೂ ಇತ್ತು ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

2 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

2 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

3 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

3 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

3 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago