Advertisement
MIRROR FOCUS

#Arecanut | ಮ್ಯಾನ್ಮಾರ್‌ ಗಡಿ ಮೂಲಕ ಅಕ್ರಮ ಅಡಿಕೆ ಸಾಗಾಟ | ಸರ್ಕಾರಕ್ಕೆ 15,000 ಕೋಟಿ ನಷ್ಟದ ಆರೋಪ | ಪ್ರಮುಖ ಆರೋಪಿ ಬಂಧನ | ನಿಲ್ಲಬಹುದೇ ಅಕ್ರಮ ಸಾಗಾಟ ?

Share

ಕಳೆದ ಕೆಲವು ಸಮಯಗಳಿಂದ ಭಾರತ-ಮ್ಯಾನ್ಮಾರ್‌ ಗಡಿಯ ಮೂಲಕ ಅಕ್ರಮವಾಗಿ ವಿದೇಶಿ ಅಡಿಕೆ ಆಮದು ನಡೆಯುತ್ತಿತ್ತು. ಹಲವು ಬಾರಿ ಭಾರೀ ಪ್ರಮಾಣದ ಅಡಿಕೆ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಮೂಲ ಪತ್ತೆ ಮಾಡುತ್ತಿದ್ದರು. ಇದೀಗ ನಾಗಪುರ ಮೂಲದ ವ್ಯಾಪಾರಿಯೊಬ್ಬನನ್ನು ಜಾರಿ ನಿರ್ದೇಶನಾಲಯ (ED)  ಬಂಧಿಸಿದೆ.

Advertisement
Advertisement
Advertisement
Advertisement
Advertisement

ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ಬೇರೆ ದೇಶಗಳಿಂದ ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಾಗಪುರ ಮೂಲದ ವ್ಯಾಪಾರಿ ವಾಸಿಂ ಬಾವ್ಲಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)  ಬಂಧಿಸಿದೆ. ಅವರನ್ನು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 30 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.  ಇದೀಗ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 15,000 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ನಾಗ್ಪುರ ಮತ್ತು ಮುಂಬೈ ಸೇರಿದಂತೆ ಇತರ ಪ್ರದೇಶಗಳಲ್ಲಿನ ಅಡಿಕೆ ವ್ಯಾಪಾರಿಗಳ ಮೇಲೆ ಇಡಿ(ED) ತನಿಖೆ ನಡೆಸುತ್ತಿದೆ.

Advertisement

ಭಾರತ, ಇಂಡೋನೇಷ್ಯಾ ಮತ್ತು ಸಾರ್ಕ್ ದೇಶಗಳಲ್ಲಿ ನೋಂದಾಯಿಸಲಾದ ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡಲಾಗುತ್ತಿತ್ತು. ಇದರ ಜೊತೆಗೆ ಮ್ಯಾನ್ಮಾರ್‌ ಮೂಲಕವೂ ಸತತವಾಗಿ ವಿವಿಧ ಮಾರ್ಗಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು.

ಭಾರತದ ಈಶಾನ್ಯ ರಾಜ್ಯಗಳಾದ  ಮಿಜೋರಾಂ ಮತ್ತು ಮಣಿಪುರ, ತ್ರಿಪುರಾ ಮೂಲಕ ಅಲ್ಲಿನ ಅಡಿಕೆಯ ಜೊತೆ ಸೇರಿಸಿಕೊಂಡು ಮಹಾರಾಷ್ಟ್ರಕ್ಕೆ ಲಾರಿ, ರೈಲು ಮೂಲಕ ತರಲಾಗುತ್ತಿತ್ತು. ಕಳೆದ ವರ್ಷ, ಸಿಬಿಐನ ನಾಗ್ಪುರ ಘಟಕವು ಸಲ್ಲಿಸಿದ ಎಫ್‌ಐಆರ್ ಆಧರಿಸಿ ಇಡಿ(ED) ಹಣ ವರ್ಗಾವಣೆಯ ತನಿಖೆಯನ್ನು ಪ್ರಾರಂಭಿಸಿತ್ತು. ಇದೀಗ ಕಸ್ಟಮ್ಸ್ ಸುಂಕವನ್ನು ತಪ್ಪಿಸುವ ಮೂಲಕ ನಡೆಯುತ್ತಿರುವ ಈ ಪ್ರಕರಣದ ಮೇಲೆ ಇಡಿ ಯ ತನಿಖೆಯು ಕೇಂದ್ರೀಕೃತವಾಗಿದೆ.

Advertisement

ಈ ತನಿಖೆಯ ಸಂದರ್ಭ ಅಡಿಕೆ ಕಳ್ಳಸಾಗಾಣಿಕೆಗೆ ಸಹಕಾರ ನೀಡುವ ನೆಲೆಯಲ್ಲಿ ಅಸ್ಸಾಂನ ಕೆಲವು ಪಕ್ಷಗಳಿಗೆ ಗಣನೀಯ ಮೊತ್ತದ ಹಣವನ್ನು ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ನಂತರ ಅದನ್ನು ಅಡಿಕೆಯ ರೂಪದಲ್ಲಿ  ವಿದೇಶಿ ಅಡಿಕೆ ಆಮದು ಮೂಲಕ ಭರ್ತಿ ಮಾಡಲಾಗಿದೆ ಎಂದೂ ತಿಳಿದುಬಂದಿದೆ. ಭಾರತ ತಲಪಿದ ಬಳಿಕ ನಕಲಿ ಬಿಲ್‌ ಮೂಲಕ ನಾಗಪುರಕ್ಕೆ ಅಡಿಕೆ ರವಾನೆಯಾಗುತ್ತಿತ್ತು.

ಮುಂಬಯಿಗೆ ಅಡಿಕೆ ತಲಪಿದ ಬಳಿಕ ಅಲ್ಲಿಂದ  ಮಾರಾಟ ಮತ್ತು ಖರೀದಿಗೆ ಅನುಕೂಲವಾಗುವಂತೆ ನಕಲಿ ಇನ್‌ವಾಯ್ಸ್‌ಗಳನ್ನು ತಯಾರಿಸಲಾಗುತ್ತಿತ್ತು ಎಂದು ಇಡಿ ಪ್ರಾಥಮಿಕ ಮಾಹಿತಿ ನೀಡಿದೆ. ಬಂಧಿತ  ಆರೋಪಿ ಆಗಾಗ್ಗೆ ಫೋನ್‌ಗಳನ್ನು ಬದಲಾಯಿಸುವ ಮೂಲಕ, ಸಮನ್ಸ್‌ಗಳನ್ನು ನಿರ್ಲಕ್ಷಿಸುವ ಮೂಲಕ ಇಡಿ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದ. ಇದಕ್ಕೆ ಕೆಲವು ಪ್ರಮುಖ ರಾಜಕೀಯ ನಾಯಕರ ಕೈವಾಡವೂ ಇತ್ತು ಎಂದು ತಿಳಿದುಬಂದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

3 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago