Advertisement
MIRROR FOCUS

#Arecanut | ಮ್ಯಾನ್ಮಾರ್‌ ಗಡಿ ಮೂಲಕ ಅಕ್ರಮ ಅಡಿಕೆ ಸಾಗಾಟ | ಸರ್ಕಾರಕ್ಕೆ 15,000 ಕೋಟಿ ನಷ್ಟದ ಆರೋಪ | ಪ್ರಮುಖ ಆರೋಪಿ ಬಂಧನ | ನಿಲ್ಲಬಹುದೇ ಅಕ್ರಮ ಸಾಗಾಟ ?

Share

ಕಳೆದ ಕೆಲವು ಸಮಯಗಳಿಂದ ಭಾರತ-ಮ್ಯಾನ್ಮಾರ್‌ ಗಡಿಯ ಮೂಲಕ ಅಕ್ರಮವಾಗಿ ವಿದೇಶಿ ಅಡಿಕೆ ಆಮದು ನಡೆಯುತ್ತಿತ್ತು. ಹಲವು ಬಾರಿ ಭಾರೀ ಪ್ರಮಾಣದ ಅಡಿಕೆ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಮೂಲ ಪತ್ತೆ ಮಾಡುತ್ತಿದ್ದರು. ಇದೀಗ ನಾಗಪುರ ಮೂಲದ ವ್ಯಾಪಾರಿಯೊಬ್ಬನನ್ನು ಜಾರಿ ನಿರ್ದೇಶನಾಲಯ (ED)  ಬಂಧಿಸಿದೆ.

ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ಬೇರೆ ದೇಶಗಳಿಂದ ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಾಗಪುರ ಮೂಲದ ವ್ಯಾಪಾರಿ ವಾಸಿಂ ಬಾವ್ಲಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)  ಬಂಧಿಸಿದೆ. ಅವರನ್ನು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 30 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.  ಇದೀಗ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 15,000 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ನಾಗ್ಪುರ ಮತ್ತು ಮುಂಬೈ ಸೇರಿದಂತೆ ಇತರ ಪ್ರದೇಶಗಳಲ್ಲಿನ ಅಡಿಕೆ ವ್ಯಾಪಾರಿಗಳ ಮೇಲೆ ಇಡಿ(ED) ತನಿಖೆ ನಡೆಸುತ್ತಿದೆ.

ಭಾರತ, ಇಂಡೋನೇಷ್ಯಾ ಮತ್ತು ಸಾರ್ಕ್ ದೇಶಗಳಲ್ಲಿ ನೋಂದಾಯಿಸಲಾದ ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡಲಾಗುತ್ತಿತ್ತು. ಇದರ ಜೊತೆಗೆ ಮ್ಯಾನ್ಮಾರ್‌ ಮೂಲಕವೂ ಸತತವಾಗಿ ವಿವಿಧ ಮಾರ್ಗಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು.

ಭಾರತದ ಈಶಾನ್ಯ ರಾಜ್ಯಗಳಾದ  ಮಿಜೋರಾಂ ಮತ್ತು ಮಣಿಪುರ, ತ್ರಿಪುರಾ ಮೂಲಕ ಅಲ್ಲಿನ ಅಡಿಕೆಯ ಜೊತೆ ಸೇರಿಸಿಕೊಂಡು ಮಹಾರಾಷ್ಟ್ರಕ್ಕೆ ಲಾರಿ, ರೈಲು ಮೂಲಕ ತರಲಾಗುತ್ತಿತ್ತು. ಕಳೆದ ವರ್ಷ, ಸಿಬಿಐನ ನಾಗ್ಪುರ ಘಟಕವು ಸಲ್ಲಿಸಿದ ಎಫ್‌ಐಆರ್ ಆಧರಿಸಿ ಇಡಿ(ED) ಹಣ ವರ್ಗಾವಣೆಯ ತನಿಖೆಯನ್ನು ಪ್ರಾರಂಭಿಸಿತ್ತು. ಇದೀಗ ಕಸ್ಟಮ್ಸ್ ಸುಂಕವನ್ನು ತಪ್ಪಿಸುವ ಮೂಲಕ ನಡೆಯುತ್ತಿರುವ ಈ ಪ್ರಕರಣದ ಮೇಲೆ ಇಡಿ ಯ ತನಿಖೆಯು ಕೇಂದ್ರೀಕೃತವಾಗಿದೆ.

ಈ ತನಿಖೆಯ ಸಂದರ್ಭ ಅಡಿಕೆ ಕಳ್ಳಸಾಗಾಣಿಕೆಗೆ ಸಹಕಾರ ನೀಡುವ ನೆಲೆಯಲ್ಲಿ ಅಸ್ಸಾಂನ ಕೆಲವು ಪಕ್ಷಗಳಿಗೆ ಗಣನೀಯ ಮೊತ್ತದ ಹಣವನ್ನು ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ನಂತರ ಅದನ್ನು ಅಡಿಕೆಯ ರೂಪದಲ್ಲಿ  ವಿದೇಶಿ ಅಡಿಕೆ ಆಮದು ಮೂಲಕ ಭರ್ತಿ ಮಾಡಲಾಗಿದೆ ಎಂದೂ ತಿಳಿದುಬಂದಿದೆ. ಭಾರತ ತಲಪಿದ ಬಳಿಕ ನಕಲಿ ಬಿಲ್‌ ಮೂಲಕ ನಾಗಪುರಕ್ಕೆ ಅಡಿಕೆ ರವಾನೆಯಾಗುತ್ತಿತ್ತು.

ಮುಂಬಯಿಗೆ ಅಡಿಕೆ ತಲಪಿದ ಬಳಿಕ ಅಲ್ಲಿಂದ  ಮಾರಾಟ ಮತ್ತು ಖರೀದಿಗೆ ಅನುಕೂಲವಾಗುವಂತೆ ನಕಲಿ ಇನ್‌ವಾಯ್ಸ್‌ಗಳನ್ನು ತಯಾರಿಸಲಾಗುತ್ತಿತ್ತು ಎಂದು ಇಡಿ ಪ್ರಾಥಮಿಕ ಮಾಹಿತಿ ನೀಡಿದೆ. ಬಂಧಿತ  ಆರೋಪಿ ಆಗಾಗ್ಗೆ ಫೋನ್‌ಗಳನ್ನು ಬದಲಾಯಿಸುವ ಮೂಲಕ, ಸಮನ್ಸ್‌ಗಳನ್ನು ನಿರ್ಲಕ್ಷಿಸುವ ಮೂಲಕ ಇಡಿ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದ. ಇದಕ್ಕೆ ಕೆಲವು ಪ್ರಮುಖ ರಾಜಕೀಯ ನಾಯಕರ ಕೈವಾಡವೂ ಇತ್ತು ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

2 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

2 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

2 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

3 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

3 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

3 hours ago