5 ಮತ್ತು8ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ರುಪ್ಸಾ ನೀಡಿದ ಮನವಿಯನ್ನು ವಿಚಾರಣೆ ನಡೆಸಿ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.
ಆದರೆ ಈಗ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ ಈ ಪ್ರಕಾರ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿರುವುದು ವರದಿಯಾಗಿದೆ. ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ ವಿಭಾಗೀಯ ಪೀಠ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.
ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ ಪರೀಕ್ಷೆಯನ್ನು ನಡೆಸಲೇ ಬೇಕು ಎಂದು ತಿಳಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತೆ ಸಿದ್ಧರಾಗಬೇಕಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ ಈ ತೀರ್ಪನ್ನು ತೆಗೆದುಕೊಂಡಿದೆ. ಮೇಲ್ಮನವಿ ವಿಚಾರಣೆ ಆಲಿಸಿ ಆದೇಶ ನೀಡಿದ ವಿಭಾಗೀಯ ಪೀಠ ಈ ನಿರ್ಧಾರವನ್ನು ತಿಳಿಸಿದೆ.
ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆ. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…