ಮಾಹಿತಿ

5 ಹಾಗೂ 8ನೇ ತರಗತಿ ಬೋರ್ಡ್ ಎಕ್ಸಾಂ : ನಿಮ್ಮ ನಿಮ್ಮ ಶಾಲೆಯಲ್ಲೇ ನಡೆಯುತ್ತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ವರ್ಷದಿಂದ 5 ನೇ ಹಾಗೂ 8 ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಗಳು ನಡೆಯುತ್ತವೆ. ಯಾವ ಶಾಲೆಯಲ್ಲಿ ಪರೀಕ್ಷೆ ನಡೆಸುತ್ತಾರೆ ಅವರನ್ನು ಹೇಗೆ ಕರೆದುಕೊಂಡು ಹೋಗೋದು ಅನ್ನೋ ಬಗ್ಗೆ ಚಿಂತೆ ಬೇಡ. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

Advertisement
Advertisement

ಈ ಸಂಬಂಧ ನಿಮ್ಮ ಮಕ್ಕಳು ಈಗ ಯಾವ ಶಾಲೆಯಲ್ಲಿ ಓದುತ್ತಿದ್ದಾರೋ ಅದೇ ಶಾಲೆಯಲ್ಲಿ ನಿಮ್ಮ ಮಕ್ಕಳಿಗೆ ಪರೀಕ್ಷೆ ನಡೆಯುತ್ತದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದ್ದರಿಂದ ಖಂಡಿತ ಈ ಬಾರಿ ಪಬ್ಲಿಕ್​ ಪರೀಕ್ಷೆ ನಡೆದೇ ನಡೆಯುತ್ತದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಮಕ್ಕಳ ಕಲಿಕೆ ಉತ್ತಮಗೊಳಿಸಲು 2022 -23 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ ಈ ವೇಳಾಪಟ್ಟಿಯ ಪ್ರಕಾರ ಪರೀಕ್ಷೆ ನಡೆಯುತ್ತದೆ.

ಮಾರ್ಚ್ 13 ರಿಂದ 18 ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು. ನಿಮ್ಮ ಮಕ್ಕಳು ಎಷ್ಟು ಅಂಕ ಪಡೆದಿದ್ದಾರೆ ಎಂಬುದು ಆ ನಂತರ ಬಿಡುಗಡೆಯಾಗುವ ಫಲಿತಾಂಶದಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದ್ದು, ಇದಕ್ಕೆ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಲು ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 minutes ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

1 hour ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

9 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

11 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

16 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

17 hours ago