Advertisement
ಮಾಹಿತಿ

5 ಹಾಗೂ 8ನೇ ತರಗತಿ ಬೋರ್ಡ್ ಎಕ್ಸಾಂ : ನಿಮ್ಮ ನಿಮ್ಮ ಶಾಲೆಯಲ್ಲೇ ನಡೆಯುತ್ತೆ

Share

ಈ ವರ್ಷದಿಂದ 5 ನೇ ಹಾಗೂ 8 ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಗಳು ನಡೆಯುತ್ತವೆ. ಯಾವ ಶಾಲೆಯಲ್ಲಿ ಪರೀಕ್ಷೆ ನಡೆಸುತ್ತಾರೆ ಅವರನ್ನು ಹೇಗೆ ಕರೆದುಕೊಂಡು ಹೋಗೋದು ಅನ್ನೋ ಬಗ್ಗೆ ಚಿಂತೆ ಬೇಡ. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ನಿಮ್ಮ ಮಕ್ಕಳು ಈಗ ಯಾವ ಶಾಲೆಯಲ್ಲಿ ಓದುತ್ತಿದ್ದಾರೋ ಅದೇ ಶಾಲೆಯಲ್ಲಿ ನಿಮ್ಮ ಮಕ್ಕಳಿಗೆ ಪರೀಕ್ಷೆ ನಡೆಯುತ್ತದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದ್ದರಿಂದ ಖಂಡಿತ ಈ ಬಾರಿ ಪಬ್ಲಿಕ್​ ಪರೀಕ್ಷೆ ನಡೆದೇ ನಡೆಯುತ್ತದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಮಕ್ಕಳ ಕಲಿಕೆ ಉತ್ತಮಗೊಳಿಸಲು 2022 -23 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ ಈ ವೇಳಾಪಟ್ಟಿಯ ಪ್ರಕಾರ ಪರೀಕ್ಷೆ ನಡೆಯುತ್ತದೆ.

ಮಾರ್ಚ್ 13 ರಿಂದ 18 ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು. ನಿಮ್ಮ ಮಕ್ಕಳು ಎಷ್ಟು ಅಂಕ ಪಡೆದಿದ್ದಾರೆ ಎಂಬುದು ಆ ನಂತರ ಬಿಡುಗಡೆಯಾಗುವ ಫಲಿತಾಂಶದಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದ್ದು, ಇದಕ್ಕೆ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಲು ಸೂಚನೆ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

9 minutes ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago