MIRROR FOCUS

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಗತ್ತು ಬದಲಾಗಿದೆ.. ಚಂದ್ರ ಲೋಕ, ಸೂರ್ಯ ಲೋಕಕ್ಕೆ ವಿಜ್ಞಾನಿಗಳು ಕಾಲಿಟ್ಟಿದ್ದಾರೆ. ಈಗಂತೂ ಶಿಕ್ಷಣವೇ Education ಜಗತ್ತು. ಇಂಥ ಕಾಲದಲ್ಲೂ ಮಕ್ಕಳು  ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರೆ ನಂಬುತ್ತೀರಾ..?  ಹೌದು ನಂಬಲೇಬೇಕು.. ಇದಕ್ಕೆ ಕಾರಣ ಬಡತನ. ಶಿಕ್ಷಣ ಇಲ್ಲದ ಬಡ ತಂದೆ ತಾಯಿ. ಇಲ್ಲೋಬ್ಬ ಬಾಲಕ ತನ್ನ ತಂದೆ ತಾಯಿಯ ಅಸಾಯಕತೆಗೆ ಬಲಿಯಾಗಿ ಕುರಿ ಕಾಯಲು ಹೋಗಿ ಶಿಕ್ಷಣದಿಂದ ವಂಚಿತನಾಗಿದ್ದ. ಆದರೆ ಈಗ ಮರಳಿ ಶಾಲೆಗೆ ಹೋಗುತ್ತಿದ್ದಾನೆ.

Advertisement

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ. ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ವೀಟ್ (X) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು.

ಈ ಟ್ವೀಟ್(ಎಕ್ಸ್) ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಟ್ವೀಟ್(ಎಕ್ಸ್) ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ.

ಅಂದು ನನಗೆ ಶಿಕ್ಷಣ ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

10 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

11 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

18 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

23 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

24 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

1 day ago