ಜಗತ್ತು ಬದಲಾಗಿದೆ.. ಚಂದ್ರ ಲೋಕ, ಸೂರ್ಯ ಲೋಕಕ್ಕೆ ವಿಜ್ಞಾನಿಗಳು ಕಾಲಿಟ್ಟಿದ್ದಾರೆ. ಈಗಂತೂ ಶಿಕ್ಷಣವೇ Education ಜಗತ್ತು. ಇಂಥ ಕಾಲದಲ್ಲೂ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರೆ ನಂಬುತ್ತೀರಾ..? ಹೌದು ನಂಬಲೇಬೇಕು.. ಇದಕ್ಕೆ ಕಾರಣ ಬಡತನ. ಶಿಕ್ಷಣ ಇಲ್ಲದ ಬಡ ತಂದೆ ತಾಯಿ. ಇಲ್ಲೋಬ್ಬ ಬಾಲಕ ತನ್ನ ತಂದೆ ತಾಯಿಯ ಅಸಾಯಕತೆಗೆ ಬಲಿಯಾಗಿ ಕುರಿ ಕಾಯಲು ಹೋಗಿ ಶಿಕ್ಷಣದಿಂದ ವಂಚಿತನಾಗಿದ್ದ. ಆದರೆ ಈಗ ಮರಳಿ ಶಾಲೆಗೆ ಹೋಗುತ್ತಿದ್ದಾನೆ.
ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ. ಯೋಗೇಶ್ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ವೀಟ್ (X) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು.
ಈ ಟ್ವೀಟ್(ಎಕ್ಸ್) ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್(ಎಕ್ಸ್) ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ.
ಅಂದು ನನಗೆ ಶಿಕ್ಷಣ ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…