Advertisement
MIRROR FOCUS

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

Share

ಜಗತ್ತು ಬದಲಾಗಿದೆ.. ಚಂದ್ರ ಲೋಕ, ಸೂರ್ಯ ಲೋಕಕ್ಕೆ ವಿಜ್ಞಾನಿಗಳು ಕಾಲಿಟ್ಟಿದ್ದಾರೆ. ಈಗಂತೂ ಶಿಕ್ಷಣವೇ Education ಜಗತ್ತು. ಇಂಥ ಕಾಲದಲ್ಲೂ ಮಕ್ಕಳು  ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರೆ ನಂಬುತ್ತೀರಾ..?  ಹೌದು ನಂಬಲೇಬೇಕು.. ಇದಕ್ಕೆ ಕಾರಣ ಬಡತನ. ಶಿಕ್ಷಣ ಇಲ್ಲದ ಬಡ ತಂದೆ ತಾಯಿ. ಇಲ್ಲೋಬ್ಬ ಬಾಲಕ ತನ್ನ ತಂದೆ ತಾಯಿಯ ಅಸಾಯಕತೆಗೆ ಬಲಿಯಾಗಿ ಕುರಿ ಕಾಯಲು ಹೋಗಿ ಶಿಕ್ಷಣದಿಂದ ವಂಚಿತನಾಗಿದ್ದ. ಆದರೆ ಈಗ ಮರಳಿ ಶಾಲೆಗೆ ಹೋಗುತ್ತಿದ್ದಾನೆ.

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ. ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ವೀಟ್ (X) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು.

ಈ ಟ್ವೀಟ್(ಎಕ್ಸ್) ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಟ್ವೀಟ್(ಎಕ್ಸ್) ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ.

ಅಂದು ನನಗೆ ಶಿಕ್ಷಣ ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 hour ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

12 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

13 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago