Advertisement
MIRROR FOCUS

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

Share

ಜಗತ್ತು ಬದಲಾಗಿದೆ.. ಚಂದ್ರ ಲೋಕ, ಸೂರ್ಯ ಲೋಕಕ್ಕೆ ವಿಜ್ಞಾನಿಗಳು ಕಾಲಿಟ್ಟಿದ್ದಾರೆ. ಈಗಂತೂ ಶಿಕ್ಷಣವೇ Education ಜಗತ್ತು. ಇಂಥ ಕಾಲದಲ್ಲೂ ಮಕ್ಕಳು  ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರೆ ನಂಬುತ್ತೀರಾ..?  ಹೌದು ನಂಬಲೇಬೇಕು.. ಇದಕ್ಕೆ ಕಾರಣ ಬಡತನ. ಶಿಕ್ಷಣ ಇಲ್ಲದ ಬಡ ತಂದೆ ತಾಯಿ. ಇಲ್ಲೋಬ್ಬ ಬಾಲಕ ತನ್ನ ತಂದೆ ತಾಯಿಯ ಅಸಾಯಕತೆಗೆ ಬಲಿಯಾಗಿ ಕುರಿ ಕಾಯಲು ಹೋಗಿ ಶಿಕ್ಷಣದಿಂದ ವಂಚಿತನಾಗಿದ್ದ. ಆದರೆ ಈಗ ಮರಳಿ ಶಾಲೆಗೆ ಹೋಗುತ್ತಿದ್ದಾನೆ.

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ. ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ವೀಟ್ (X) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು.

ಈ ಟ್ವೀಟ್(ಎಕ್ಸ್) ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಟ್ವೀಟ್(ಎಕ್ಸ್) ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ.

ಅಂದು ನನಗೆ ಶಿಕ್ಷಣ ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

55 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

2 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

9 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

15 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

15 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago