Advertisement
MIRROR FOCUS

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

Share

ಜಗತ್ತು ಬದಲಾಗಿದೆ.. ಚಂದ್ರ ಲೋಕ, ಸೂರ್ಯ ಲೋಕಕ್ಕೆ ವಿಜ್ಞಾನಿಗಳು ಕಾಲಿಟ್ಟಿದ್ದಾರೆ. ಈಗಂತೂ ಶಿಕ್ಷಣವೇ Education ಜಗತ್ತು. ಇಂಥ ಕಾಲದಲ್ಲೂ ಮಕ್ಕಳು  ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರೆ ನಂಬುತ್ತೀರಾ..?  ಹೌದು ನಂಬಲೇಬೇಕು.. ಇದಕ್ಕೆ ಕಾರಣ ಬಡತನ. ಶಿಕ್ಷಣ ಇಲ್ಲದ ಬಡ ತಂದೆ ತಾಯಿ. ಇಲ್ಲೋಬ್ಬ ಬಾಲಕ ತನ್ನ ತಂದೆ ತಾಯಿಯ ಅಸಾಯಕತೆಗೆ ಬಲಿಯಾಗಿ ಕುರಿ ಕಾಯಲು ಹೋಗಿ ಶಿಕ್ಷಣದಿಂದ ವಂಚಿತನಾಗಿದ್ದ. ಆದರೆ ಈಗ ಮರಳಿ ಶಾಲೆಗೆ ಹೋಗುತ್ತಿದ್ದಾನೆ.

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ. ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ವೀಟ್ (X) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು.

ಈ ಟ್ವೀಟ್(ಎಕ್ಸ್) ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಟ್ವೀಟ್(ಎಕ್ಸ್) ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ.

ಅಂದು ನನಗೆ ಶಿಕ್ಷಣ ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

10 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

23 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago