Advertisement
MIRROR FOCUS

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

Share

ಜಗತ್ತು ಬದಲಾಗಿದೆ.. ಚಂದ್ರ ಲೋಕ, ಸೂರ್ಯ ಲೋಕಕ್ಕೆ ವಿಜ್ಞಾನಿಗಳು ಕಾಲಿಟ್ಟಿದ್ದಾರೆ. ಈಗಂತೂ ಶಿಕ್ಷಣವೇ Education ಜಗತ್ತು. ಇಂಥ ಕಾಲದಲ್ಲೂ ಮಕ್ಕಳು  ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರೆ ನಂಬುತ್ತೀರಾ..?  ಹೌದು ನಂಬಲೇಬೇಕು.. ಇದಕ್ಕೆ ಕಾರಣ ಬಡತನ. ಶಿಕ್ಷಣ ಇಲ್ಲದ ಬಡ ತಂದೆ ತಾಯಿ. ಇಲ್ಲೋಬ್ಬ ಬಾಲಕ ತನ್ನ ತಂದೆ ತಾಯಿಯ ಅಸಾಯಕತೆಗೆ ಬಲಿಯಾಗಿ ಕುರಿ ಕಾಯಲು ಹೋಗಿ ಶಿಕ್ಷಣದಿಂದ ವಂಚಿತನಾಗಿದ್ದ. ಆದರೆ ಈಗ ಮರಳಿ ಶಾಲೆಗೆ ಹೋಗುತ್ತಿದ್ದಾನೆ.

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ. ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ವೀಟ್ (X) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು.

ಈ ಟ್ವೀಟ್(ಎಕ್ಸ್) ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಟ್ವೀಟ್(ಎಕ್ಸ್) ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ.

ಅಂದು ನನಗೆ ಶಿಕ್ಷಣ ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago