ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.
ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…