ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.
ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…