ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.
ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…