ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!

May 11, 2024
2:45 PM

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ ಮೆಣಸಿನಕಾಯಿ ಬೆಲೆ ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ(Customer) ಖಾರದ ಅನುಭವವಾಗುತ್ತಿದೆ. ಮಳೆ(Rain) ಇಲ್ಲದ ಕಾರಣ ದಿನನಿತ್ಯದ ವಸ್ತುಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರು ಅದು ಬೆಲೆ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ.

ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ.

ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ.

ಇನ್ನು ಬೆಂಗಳೂರಲ್ಲಿ ಸದ್ಯ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ ವಾರ ಎಳನೀರು ಬೆಲೆಯೂ ಸಹ ಹೆಚ್ಚಾಗಿತ್ತು. ಈಗಲೂ ಕೆಲವೆಡೆ 50 ರೂಪಾಯಿಗೆ ಒಂದು ಎಳನೀರು ಇದೆ. ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸಿ ಹೋಗ್ತಾ ಇದ್ದಾರೆ. ಒಂದೆಡೆ ಬಿಸಿಲು ಸುಡ್ತಾ ಇದ್ರೆ, ಇನ್ನೊಂದೆಡೆ ಜೇಬು ಸುಡ್ತಿದೆ ಎಂದು ಹೇಳ್ತಾ ಇದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror