Advertisement
MIRROR FOCUS

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!

Share

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ ಮೆಣಸಿನಕಾಯಿ ಬೆಲೆ ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ(Customer) ಖಾರದ ಅನುಭವವಾಗುತ್ತಿದೆ. ಮಳೆ(Rain) ಇಲ್ಲದ ಕಾರಣ ದಿನನಿತ್ಯದ ವಸ್ತುಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರು ಅದು ಬೆಲೆ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ.

ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ.

ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ.

ಇನ್ನು ಬೆಂಗಳೂರಲ್ಲಿ ಸದ್ಯ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ ವಾರ ಎಳನೀರು ಬೆಲೆಯೂ ಸಹ ಹೆಚ್ಚಾಗಿತ್ತು. ಈಗಲೂ ಕೆಲವೆಡೆ 50 ರೂಪಾಯಿಗೆ ಒಂದು ಎಳನೀರು ಇದೆ. ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸಿ ಹೋಗ್ತಾ ಇದ್ದಾರೆ. ಒಂದೆಡೆ ಬಿಸಿಲು ಸುಡ್ತಾ ಇದ್ರೆ, ಇನ್ನೊಂದೆಡೆ ಜೇಬು ಸುಡ್ತಿದೆ ಎಂದು ಹೇಳ್ತಾ ಇದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

22 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

22 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago