ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ ಮೆಣಸಿನಕಾಯಿ ಬೆಲೆ ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ(Customer) ಖಾರದ ಅನುಭವವಾಗುತ್ತಿದೆ. ಮಳೆ(Rain) ಇಲ್ಲದ ಕಾರಣ ದಿನನಿತ್ಯದ ವಸ್ತುಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರು ಅದು ಬೆಲೆ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ.
ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ.
ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ.
ಇನ್ನು ಬೆಂಗಳೂರಲ್ಲಿ ಸದ್ಯ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ ವಾರ ಎಳನೀರು ಬೆಲೆಯೂ ಸಹ ಹೆಚ್ಚಾಗಿತ್ತು. ಈಗಲೂ ಕೆಲವೆಡೆ 50 ರೂಪಾಯಿಗೆ ಒಂದು ಎಳನೀರು ಇದೆ. ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸಿ ಹೋಗ್ತಾ ಇದ್ದಾರೆ. ಒಂದೆಡೆ ಬಿಸಿಲು ಸುಡ್ತಾ ಇದ್ರೆ, ಇನ್ನೊಂದೆಡೆ ಜೇಬು ಸುಡ್ತಿದೆ ಎಂದು ಹೇಳ್ತಾ ಇದ್ದಾರೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…