ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ ಮೆಣಸಿನಕಾಯಿ ಬೆಲೆ ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ(Customer) ಖಾರದ ಅನುಭವವಾಗುತ್ತಿದೆ. ಮಳೆ(Rain) ಇಲ್ಲದ ಕಾರಣ ದಿನನಿತ್ಯದ ವಸ್ತುಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರು ಅದು ಬೆಲೆ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ.
ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ.
ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ.
ಇನ್ನು ಬೆಂಗಳೂರಲ್ಲಿ ಸದ್ಯ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ ವಾರ ಎಳನೀರು ಬೆಲೆಯೂ ಸಹ ಹೆಚ್ಚಾಗಿತ್ತು. ಈಗಲೂ ಕೆಲವೆಡೆ 50 ರೂಪಾಯಿಗೆ ಒಂದು ಎಳನೀರು ಇದೆ. ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸಿ ಹೋಗ್ತಾ ಇದ್ದಾರೆ. ಒಂದೆಡೆ ಬಿಸಿಲು ಸುಡ್ತಾ ಇದ್ರೆ, ಇನ್ನೊಂದೆಡೆ ಜೇಬು ಸುಡ್ತಿದೆ ಎಂದು ಹೇಳ್ತಾ ಇದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…